Close Menu
Cini ShodhaCini Shodha

    Subscribe to Updates

    Get the latest creative news from FooBar about art, design and business.

    What's Hot

    Nishvika Naidu: ಮಾರ್ಕ್ ಮೂಲಕ ಖುಲಾಯಿಸಿತಾ ಅದೃಷ್ಟ?

    rajinikanth movie: ಮಹಿಳಾ ನಿರ್ದೇಶಕಿಯ ಕಥೆಗೆ ರಜನಿ ಒಪ್ಪಿಗೆ?

    Pyaar Kannada #1 Movie: ಪ್ರೇಮಕಥನಕ್ಕೆ ಕನಸುಗಾರನ ಸಾಥ್!

    Facebook X (Twitter) Instagram
    Cini ShodhaCini Shodha
    • ಮುಖಪುಟ
    • ಸ್ಪಾಟ್ ಲೈಟ್
    • ಟೇಕಾಫ್
    • ಜಾಪಾಳ್ ಜಂಕ್ಷನ್
    • ಎಡಿಟೋರಿಯಲ್
    • ಬಣ್ಣದ ಹೆಜ್ಜೆ
    • ಕಿರುತೆರೆ ಕಿಟಕಿ
    • ಹೀಗಿದೆ ಈ ಪಿಚ್ಚರ್
    • ಕಲರ್ ಜೋನ್
      • ಬಾಲಿವುಡ್
      • ಹಾಲಿವುಡ್
      • ಸೌತ್ ಜೋನ್
    • OTT
    Facebook X (Twitter) Instagram
    Cini ShodhaCini Shodha
    You are at:Home»ಬಣ್ಣದ ಹೆಜ್ಜೆ»apayavide echarike movie: ನಟನಾಗಿ ಗಮನ ಸೆಳೆದ ಮಿಥುನ್ ತೀರ್ಥಹಳ್ಳಿ!
    ಬಣ್ಣದ ಹೆಜ್ಜೆ

    apayavide echarike movie: ನಟನಾಗಿ ಗಮನ ಸೆಳೆದ ಮಿಥುನ್ ತೀರ್ಥಹಳ್ಳಿ!

    By Santhosh Bagilagadde05/03/2025
    Facebook Twitter Telegram Email WhatsApp
    e6d17ff3 c628 4874 958c 583a041bbf89
    Share
    Facebook Twitter LinkedIn WhatsApp Email Telegram

    ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಅಪಾಯವಿದೆ ಎಚ್ಚರಿಕೆ ಚಿತ್ರ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಹಾರರ್ ಸಿನಿಮಾಗಳೆಂದರೆ ಬಲು ಪ್ರೀತಿ ಹೊಂದಿರುವ ದೊಡ್ಡ ಪ್ರೇಕ್ಷಕ ವರ್ಗ ಕನ್ನಡದಲ್ಲಿದೆ. ಹಾಗಿರುವಾಗ, ಆ ಜಾನರಿನ ಸಿದ್ಧಸೂತ್ರಗಳಾಚೆ ಹಬ್ಬಿಕೊಂಡಿರುವ ಈ ಸಿನಿಮಾ ಸಹಜವಾಗಿಯೇ ನೋಡುಗರನ್ನು ಸೆಳೆದುಕೊಂಡಿದೆ. ಈ ಸಿನಿಮಾ ಮೂಲಕವೇ ಹೊಸಾ ಪ್ರತಿಭೆಗಳೊಂದಷ್ಟು ಮಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆ ಸಾಲಿನಲ್ಲಿ ಗಾಬ್ರಿ ಅಂತೊಂದು ಮುಖ್ಯ ಪಾತ್ರವನ್ನು ನಿರ್ವಹಿಸಿರುವ ಮಿಥುನ್ ತೀರ್ಥಹಳ್ಳಿ ನಿರ್ವಹಿಸಿದ್ದಾರೆ. ಒಂದಷ್ಟು ಭಿನ್ನ ಚಹರೆಗಳನ್ನು ಹೊಂದಿರುವ ಆ ಪಾತ್ರವೀಗ ನೋಡುಗರಿಂದಲೂ ಮೆಚ್ಚುಗೆ ಪಡೆದುಕೊಂಡಿದೆ. ಒಂದು ಹಂತದಲ್ಲಿ ನಟನಾಗಬೇಕೆಂಬ ಕನಸು ಕಂಡು, ಆ ನಂತರ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಿಥುನ್ ಪಾಲಿಗೆ ಅಪಾಯವಿದೆ ಚಿತ್ರ ತಿರುವು ನೀಡೋ ಲಕ್ಷಣಗಳಿದ್ದಾವೆ!

    e7d7b593 d32c 4281 8643 d9259962bb2fಕಾಲೇಜು ದಿನಗಳಲ್ಲಿಯೇ ನಟನಾಗಬೇಕೆಂಬ ಕನಸನ್ನು ಸಾಕಿಕೊಂಡಿದ್ದವರು ಮಿಥುನ್. ಡಿಗ್ರಿ ವ್ಯಾಸಂಗದ ಸಮಯದಲ್ಲಿ ಅಚಾನಕ್ಕಾಗಿ ಅದಕ್ಕೊಂದು ವೇದಿಕೆ ಸಿಕ್ಕಿತ್ತು. ಆ ದಿನಗಳಲ್ಲಿ ವಿಜಯ್ ರಾಘವೇಂದ್ರ ನಟಿಸಿದ್ದ ಮಾಲ್ಗುಡಿ ಡೇಸ್ ಚಿತ್ರದ ಆಡಿಷನ್ ಕರೆಯಲಾಗಿತ್ತು. ಅದರಲ್ಲಿ ಭಾಗಿಯಾಗಿದ್ದ ಮಿಥುನ್ ಗೆ ರಾಜಣ್ಣ ಎಂಬ ಪಾತ್ರದಲ್ಲಿ ನಟಿಸೋ ಅವಕಾಶ ಸಿಕ್ಕಿತ್ತು. ಆ ಪಾತ್ರ ಪ್ರೇಕ್ಷರಿಗೂ ಹಿಡಿಸಿತ್ತು. ಆ ಬಳಿಕ ಸಿನಿಮಾ ರಂಗದಲ್ಲಿ ನಟನಾಗಿ ನೆಲೆ ಕಂಡುಕೊಳ್ಳಬೇಕೆಂಬ ಇರಾದೆಯಿಂದ ಬೆಂಗಳೂರಿಗೆ ಬಂದಿಳಿದಿದ್ದ ಮಿಥುನ್‌ಗೆ ವಾಸ್ತವವೆಂಬುದು ನಾನಾ ರೀತಿಯಲ್ಲಿ ದರ್ಶನ ಕೊಟ್ಟಿತ್ತು. ತೀರ್ಥಹಳ್ಳಿಯಲ್ಲಿರುವಾಗಲೇ ರಂಗಭೂಮಿಯ ನಂಟು ಹೊಂದಿದ್ದ ಮಿಥುನ್ ನಟನೆ, ನಿರ್ದೇಶನ ಸೇರಿದಂತೆ ನಾನಾ ವೀಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಆ ಅನುಭವವೇ ಕೈ ಹಿಡಿದೀತೆಂದುಕೊಂಡಿದ್ದ ಆತನಿಗೆ ಸಿನಿಮಾ, ಸೀರಿಯಲ್ ಜಗತ್ತಿನ ಬೇರೆ ಬೇರೆ ಮಾನದಂಡಗಳ ಅರಿವಾಗಿತ್ತು.

    ea4f0e91 2e2a 4452 b247 40bda5fb8ea7ಅನೇಕ ಸೀರಿಯಲ್, ಸಿನಿಮಾಗಳ ಆಡಿಷನ್ನುಗಳಲ್ಲಿ ಭಾಗಿಯಾದರೂ ಅದೇಕೋ ಅವಕಾಶವೆಂಬುಉದು ಕೈಗೆಟುಕದೆ ಸತಾಯಿಸಲಾರಂಭಿಸಿತ್ತು. ಆ ನಂತರ ನಿರ್ದೇಶನ ವಿಭಾಗದತ್ತ ಆಕರ್ಷಿತರಾದ ಮಿಥುನ್, ಯುಗದೋಳ್, ಡಿಸೆಂಬರ್ ೨೪ ಮುಂತಾದ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇತ್ತೀಚೆಗಷ್ಟೆ ವಿಕಲ್ಪ ಅನ್ನೋ ಸಿನಿಮಾದ ಭಾಗವಾಗಿದ್ದರು. ಹೀಗಿರುವಾಗಲೇ ಅಪಾಯವಿದೆ ಎಚ್ಚರಿಕೆ ಚಿತ್ರದ ಆಡಿಷನ್ ನಡೆಯುತ್ತಿರೋದನ್ನು ಮನಗಂಡ ಮಿಥುನ್ ಯಾವುದಕ್ಕೂ ಇರಲಿ ಅಂತ ಭಾಗಿಯಾಗಿದ್ದರು. ನಂತರ ಗಾಬ್ರಿ ಅನ್ನೋ ಮುಖ್ಯ ಪಾತ್ರಕ್ಕೆ ಆಯ್ಕೆಯಾಗಿದ್ದರು. ಆ ನಂತರದ ಯಾನ ಮಿಥುನ್ ಪಾಲಿಗೆ ಚೆಂದದ ಅನುಭವಗಳನ್ನು ಕೊಡಮಾಡಿದೆ. ಯಾಕೆಂದರೆ, ಗಾಬ್ರಿ ಅನ್ನೋ ಪಾತ್ರಕ್ಕಾಗಿ ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ ಎಂಟು ತಿಂಗಳ ಕಾಲ ರಿಹರ್ಸಲ್ ನಡೆಸಿದ್ದರಂತೆ. ಹಾಗೆ ಪಳಗಿಕೊಂಡಿದ್ದರಿಂದಲೇ ಗಾಬ್ರಿಒ ಎಂಬ ಪಾತ್ರಕ್ಕೆ ಪರಿಣಾಮಕಾರಿಯಾಗಿ ಜೀವ ತುಂಬಲು ಸಾಧ್ಯವಾಗಿದೆ ಎಂಬ ಭಾವ ಮಿಥುನ್ ರದ್ದು.

    3fa2498c cc69 4c4c 89cf f8930efe471dಹೀಗೆ ನಟನಾಗೋ ಕನಸಿನ ಮೊದಲ ಹೆಜ್ಜೆಯಲ್ಲಿಯೇ ಮಿಥುನ್ ಗೆ ಆಶಾದಾಯಕ ಪ್ರತಿಕ್ರಿಯೆಗಳು ಸಿಕ್ಕಿವೆ. ಆದರೆ ಕಷ್ಟಕಾಲದಲ್ಲಿ ಬದುಕಲು ಅವಕಾಶ ಮಾಡಿಕೊಟ್ಟ ನಿರ್ದೇಶನ ವಿಭಾಗವೇ ಅವರ ಪಾಲಿನ ಮೊದಲ ಆಧ್ಯತೆ. ಮುಂದಿನ ದಿನಗಳಲ್ಲಿ ನಟನೆ ಮತ್ತು ನಿರ್ದೇಶನಗಳೆರಡನ್ನೂ ಸರಿದೂಗಿಸಿಕೊಂಡು ಹೋಗುವ ನಿರ್ಧಾರ ಅವರದ್ದಿದ್ದಂತಿದೆ. ಒಂದು ಯಶಸ್ಸಿನ ಆವೇಗಕ್ಕೊಳಗಾಗದೆ, ಅತ್ಯಂತ ಸಮಚಿತ್ತದಿಂದ ನಿರ್ಧಾರ ತಳೆಯಲು ಮಿಥುನ್ ಗೆ ಸಾಧ್ಯವಾದದ್ದರ ಹಿಂದೆ ಅವರೇ ಕಂಡುಂಡ ಕಷ್ಟಗಳ ಕಿಸುರಿದೆ. ಬೆಂಗಳೂರಿಗೆ ಬಂದ ಹೊಸತರಲ್ಲಿ ಬೇರೆ ದಾರಿ ಕಾಣದೆ ಗೆಳೆಯನ ಜೊತೆ ಲಾಡ್ಜಿನಲ್ಲಿ ಕೆಲಸಕ್ಕಿದ್ದುಕೊಂಡೇ ಅವಕಾಶಗಳಿಗಾಗಿ ಅರಸುವ ಸಂದರ್ಭವೂ ಬಂದೊದಗಿತ್ತು.

    Apayavide Echcharike 1024x576 1 ಹೀಗೆ ನಾನಾ ಕೆಲಸಗಳನ್ನು ಮಾಡುತ್ತಲೇ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ಬದುಕು ಸಲೀಸಾಗಿರಲಿಲ್ಲ. ಕೆಲವೊಂದು ಅವಕಾಶಗಳು ಸಿಕ್ಕ ಸಂದರ್ಭದಲ್ಲಿ ಜೊಮ್ಯಾಟೋದಂಥಾ ಡೆಲಿವರಿ ಕಸುಬು ಮಾಡುತ್ತಲೇ ಜೀವನ ನಡೆಸಿದ ಕಷ್ಟದ ದಿನಗಳನ್ನೂ ಮಿಥುನ್ ಕಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬದುಕು ಒಂದಷ್ಟು ಸಹ್ಯವಾದ ಭಾವ ಅವರಲ್ಲಿದೆ. ಅಪಾಯವಿದೆ ಎಚ್ಚರಿಕೆ ಚಿತ್ರವಂತೂ ಈತನ ಪಾಲಿಗೆ ಆಕ್ಸಿಜನ್ನಿನಂಥಾ ಸಿನಿಮಾ. ಇದರ ಗ್ರಾಬ್ರಿ ಎಂಬ ಪಾತ್ರದ ಮೂಲಕವೇ ಮತ್ತೊಂದಷ್ಟು ಅವಕಾಶಗಳು ಸಿಕ್ಕರೂ ಅಚ್ಚರಿಯೇನಿಲ್ಲ. ಹೀಗೆ ಒಂದು ಸಿನಿಮಾ ಒಂದಷ್ಟು ಯಶ ಕಂಡರೆ ಅದರ ಭಾಗವಾಗಿದ್ದವರ ಬದುಕು ಹಸನಾಗುತ್ತೆ. ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ ಅಪಾಯವಿದೆ ಎಚ್ಚರಿಕೆ ಚಿತ್ರದ ಭೂಮಿಕೆಯಲ್ಲಿಯೂ ಅಂಥಾದ್ದೊಂದು ಚಮತ್ಕಾರ ನಡೆಯಲಾರಂಭಿಸಿದೆ!

    #abhijiththirthahalli #apayavideeccharike #apayavideecharike #mithunthirthahalli bannadahejje cinishodha kfi lifestory sandalwood
    Share. Facebook Twitter LinkedIn WhatsApp Telegram Email
    Previous Articleapayavide echarike movie: ಅಪಾಯವಿದೆ ಎಚ್ಚರಿಕೆ ಬಗ್ಗೆ ನಿರ್ದೇಶಕ ತೆರೆದಿಟ್ಟ ಅಚ್ಚರಿ!
    Next Article arjun krishna is no more: ಅದು ನಿರ್ದೇಶಕನಾಗಲೆಂದೇ ಹುಟ್ಟಿದಂತಿದ್ದ ಆಪ್ತ ಜೀವ!
    Santhosh Bagilagadde

    Santhosh Bagilagadde is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Santhosh has worked in reputed publications like Hi Bangalore, Agni, Lankesh Patrike and Himagni.

    Related Posts

    Nishvika Naidu: ಮಾರ್ಕ್ ಮೂಲಕ ಖುಲಾಯಿಸಿತಾ ಅದೃಷ್ಟ?

    02/01/2026

    Pyaar Kannada #1 Movie: ಪ್ರೇಮಕಥನಕ್ಕೆ ಕನಸುಗಾರನ ಸಾಥ್!

    01/01/2026

    Chaithra Achar New Movie : ಭಿನ್ನ ಬಗೆಯ ಪಾತ್ರದಲ್ಲಿ ಮಿಂಚಲಣಿಯಾದ ಚೈತ್ರಾ!

    01/01/2026
    Search
    Category
    • Cinema (5)
    • OTT (4)
    • ಕಿರುತೆರೆ ಕಿಟಕಿ (5)
    • ಜಾಪಾಳ್ ಜಂಕ್ಷನ್ (37)
    • ಟೇಕಾಫ್ (10)
    • ಬಣ್ಣದ ಹೆಜ್ಜೆ (25)
    • ಬಾಲಿವುಡ್ (81)
    • ಸೌತ್ ಜೋನ್ (138)
    • ಸ್ಪಾಟ್ ಲೈಟ್ (218)
    • ಹಾಲಿವುಡ್ (2)
    • ಹೀಗಿದೆ ಈ ಪಿಚ್ಚರ್ (20)
    Recommended Host
    ಶೋಧ ನ್ಯೂಸ್ ಗೆ ಭೇಟಿ ನೀಡಿ
    Shodha News
    Top Posts

    mavalli karthik: ರಂಗಭೂಮಿ ನಟನ ಸಿನಿಮಾ-ಮಾಧ್ಯಮ ಯಾನ!

    21/11/202332 Views

    bhajarangi loki: ಅಬ್ಬರಿಸೋ ಲೋಕಿಗೆ ಸಿಕ್ಕಿದ್ದು ಎಂಥಾ ಪಾತ್ರ?

    30/05/202526 Views

    Jailer2 Movie Updates: ಆಮೀರ್ ಖಾನ್ ಕಾಮಿಡಿ ಪೀಸಾಗಿದ್ದ ಫ್ಲಾಶ್‌ಬ್ಯಾಕ್!

    05/12/202521 Views

    arjun krishna is no more: ಅದು ನಿರ್ದೇಶಕನಾಗಲೆಂದೇ ಹುಟ್ಟಿದಂತಿದ್ದ ಆಪ್ತ ಜೀವ!

    09/03/202520 Views
    Don't Miss
    ಸ್ಪಾಟ್ ಲೈಟ್ 02/01/2026

    Nishvika Naidu: ಮಾರ್ಕ್ ಮೂಲಕ ಖುಲಾಯಿಸಿತಾ ಅದೃಷ್ಟ?

    ಕೆಲ ನಟಿಯರು ಒಂದೇ ಒಂದು ಸಿನಿಮಾ ಮೂಲಕ ಸ್ಟಾರುಗಿರಿ ಪಡೆದು ಮೆರೆದುಬಿಡುತ್ತಾರೆ. ನೋಡ ನೋಡುತ್ತಲೇ ಬೇರೆ ಭಾಷೆಗಳಿಗೂ ಹಾರಿ ಮಿರಮಿರ…

    rajinikanth movie: ಮಹಿಳಾ ನಿರ್ದೇಶಕಿಯ ಕಥೆಗೆ ರಜನಿ ಒಪ್ಪಿಗೆ?

    Pyaar Kannada #1 Movie: ಪ್ರೇಮಕಥನಕ್ಕೆ ಕನಸುಗಾರನ ಸಾಥ್!

    Jananayagan Trailer : ರೀಮೇಕ್ ಸರಕು ಹೇಗಿದ್ದೀತೆಂಬ ಕೌತುಕ!

    Stay In Touch
    • Facebook
    • Instagram
    • YouTube
    • WhatsApp
    Tags
    #actress (18) #alluarjun (8) #bilichukkihallihakki (8) #bilichukkihallihakkimovie (6) #gunsandrosesmovie) (6) #kannadamovie (11) #kiccha (6) #maheshgowda (7) #pavithragowda (8) #renukaswamymurdercase (10) 'santhoshbagilagadde (7) bahubali (8) bannadahejje (17) biggbosskannada (6) bollywood (74) challengingstardarshan (10) cinishodha (139) cinishodhareview (16) coolie (6) crime (8) darshan (18) jailer (8) kanthara (7) kerebete_gowrishankar_titlesong_kfi_byvijayendra_shivamogga_sandalwood_kfi_cinishodha (10) kfi (170) kgf (8) kicchasudeep (11) kicchasudeepa (6) krishnegowda (6) lifestory (19) mollywood (10) pawankalyan (8) pinkielli (5) prabhas (19) prashanthneel (7) rajani (6) rajanikanth (12) rashmikamandanna (9) ravike_prasanga_kannadamovie_geethabharathibhat_santhoshkodenkeri_kfi_sandalwood_cinishodha (7) rip (6) rukminivasanth (7) sandalwood (198) shivarajkumar (9) tollywood (60) yash (11)
    ನಮ್ಮ ಬಗ್ಗೆ

    ಈ ನಾಡಿನಲ್ಲಿ ಹೆಸರಾಗಿರುವ ಹಾಯ್ ಬೆಂಗಳೂರ್, ಅಗ್ನಿ, ಲಂಕೇಶ್ ಪತ್ರಿಕೆ, ಹಿಮಾಗ್ನಿ ಮಂತಾದ ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ, ತಮ್ಮದೇ ಆದ ಛಾಪು ಮೂಡಿಸಿರುವವರು ಪತ್ರಕರ್ತ ಸಂತೋಷ್ ಬಾಗಿಲಗದ್ದೆ. ರಾಜಕೀಯ, ಅಪರಾಧ, ಸಿನಿಮಾ ಸೇರಿದಂತೆ ತನಿಖಾ ಪತ್ರಿಕೋದ್ಯಮದಲ್ಲಿ ದಶಕಗಳಿಗೂ ಹೆಚ್ಚು ಕಾಲ ಪಳಗಿಕೊಂಡು, ಅನೇಕ ಭ್ರಷ್ಟರನ್ನು ಬಯಲಾಗಿಸಿರುವ ಬಾಗಿಲಗದ್ದೆ ಆರಂಭಿಸಿರುವ ವಿಭಿನ್ನ ಡಿಜಿಟಲ್ ಹೆಜ್ಜೆ ಶೋಧ ಮತ್ತು ಸಿನಿ ಶೋಧ. ಇದು ಹೊಸಾ ಆಯಾಮದ ಪತ್ರಿಕೋದ್ಯಮ. ಸತ್ಯದ ಭೂಮಿಕೆಯ ನೇರ-ನಿಷ್ಠುರ ವರದಿಗಳ ಸಂಕಲ್ಪದೊಂದಿಗೆ, ಭಿನ್ನ ಶೈಲಿಯ ಬರವಣಿಗೆಯ ಮೂಲಕ ಹೊಸತೊಂದು ಜಗತ್ತು ನಿಮ್ಮೆದುರು ನಿರಂತವಾಗಿ ತೆರೆದುಕೊಳ್ಳಲಿದೆ; ಅಚ್ಚರಿಗೀಡುಮಾಡಲಿದೆ!
    ಅಂದಹಾಗೆ, ಇಲ್ಲಿ ಪ್ರಕಟವಾಗೋ ಯಾವುದೇ ಬರಹಗಳನ್ನು ಯಾರೂ ಭಟ್ಟಿ ಇಳಿಸುವಂತಿಲ್ಲ. ಅಂಥಾ ಕಳವು ವೃತ್ತಾಂತ ಗಮನಕ್ಕೆ ಬಂದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

    All Rights Reserved by dreamwings media
    Email: dreamwingsmedia@gmail.com

    Facebook X (Twitter) YouTube WhatsApp
    Most Popular

    jeevasakhi: ಕಿರುಚಿತ್ರದೊಂದಿಗೆ ಪರೀಕ್ಷೆಗೊಡ್ಡಿಕೊಂಡ ಸಂಗಮೇಶ್ ಪಾಟೀಲ್!

    01/06/20230 Views

    samantha ruth prabhu: ನೋವಿನ ಬಳಿಕ ಕಣ್ತೆರೆಯಿತು ನಲಿವಿನ ಪರ್ವ!

    02/06/20230 Views

    pinki elli review: ಅಬ್ಬರವಿಲ್ಲದೆ ಆದ್ರ್ರಗೊಳಿಸುವ ಅಪರೂಪದ ಚಿತ್ರ!

    03/06/20230 Views
    Copyrights © 2022 - 26, All Rights Reserved by Cini Shodha | Developed by: DIGICUBE SOLUTIONS |
    Follow us on

    Type above and press Enter to search. Press Esc to cancel.