Cini ShodhaCini Shodha

    Subscribe to Updates

    Get the latest creative news from FooBar about art, design and business.

    What's Hot

    sangeetha sringeri: ರಕ್ಷಿತ್ ಶೆಟ್ಟಿ ಹೀರೋಯಿನ್ ಹೀಗೇಕಾದಳು?

    neethu vanajakshi: ಬಿಗ್ ಬಾಸ್ ನ ಅಸಲೀ ಆಕರ್ಷಣೆ ನೀತು ವನಜಾಕ್ಷಿ!

    kapata nataka sutradhari trailer review: ಚರ್ಚೆಗೆ ಗ್ರಾಸವಾಯ್ತು ಕಪಟ ನಾಟಕ ಸೂತ್ರಧಾರಿ ಟ್ರೈಲರ್!

    Facebook Twitter Instagram
    Wednesday, July 2
    Facebook Twitter Instagram
    Cini ShodhaCini Shodha
    • ಮುಖಪುಟ
    • ಸ್ಪಾಟ್ ಲೈಟ್
    • ಟೇಕಾಫ್
    • ಜಾಪಾಳ್ ಜಂಕ್ಷನ್
    • ಎಡಿಟೋರಿಯಲ್
    • ಬಣ್ಣದ ಹೆಜ್ಜೆ
    • ಕಿರುತೆರೆ ಕಿಟಕಿ
    • ಹೀಗಿದೆ ಈ ಪಿಚ್ಚರ್
    • ಕಲರ್ ಜೋನ್
      • ಬಾಲಿವುಡ್
      • ಹಾಲಿವುಡ್
      • ಸೌತ್ ಜೋನ್
    • OTT
    Cini ShodhaCini Shodha
    You are at:Home » Blog » chola movie: ನಿರ್ಮಾಪಕ ಸುರೇಶ್ ನಿರ್ದೇಶಕರಾದ ಅಚ್ಚರಿ!
    ಸ್ಪಾಟ್ ಲೈಟ್

    chola movie: ನಿರ್ಮಾಪಕ ಸುರೇಶ್ ನಿರ್ದೇಶಕರಾದ ಅಚ್ಚರಿ!

    By Santhosh Bagilagadde01/07/2025Updated:01/07/2025
    Facebook Twitter Telegram Email WhatsApp
    Share
    Facebook Twitter LinkedIn WhatsApp Email Telegram

    ಕನ್ನಡ ಚಿತ್ರರಂಗದಲ್ಲಿ ನಾಯಕನಾಗಿ ನೆಲೆ ಕಂಡುಕೊಳ್ಳಬೇಕೆಂಬ ಮಹತ್ವಾಕಾಂಕ್ಷೆ ಹೊತ್ತಿರುವ ಹುಡುಗ (rural star anjan) ರೂರಲ್ ಸ್ಟಾರ್ ಅಂಜನ್. ಕೆಲ ಮಂದಿ ಇಂಥಾ ಕನಸನ್ನಿಟ್ಟುಕೊಂಡು ಊರೆಲ್ಲ ಅಲೆದಾಡುತ್ತಾರೆ. ಮತ್ಯಾರದ್ದೋ ಬಾಲ ಹಿಡಿದು ಹೊರಡುತ್ತಾರೆ. ಆದರೆ ನಾಯಕ ನಟನಾಗಲು ಬೇಕಾದ ಪರಿಶ್ರಮ ಮಾತ್ರ ಎಳ್ಳಷ್ಟೂ ಇರುವುದಿಲ್ಲ. ಈ ಸಾಲಿನಲ್ಲಿ (anjan) ಅಂಜನ್ ಖಂಡಿತಾ ಸೇರ್ಪಡೆಗೊಳ್ಳುವುದಿಲ್ಲ. ಯಾಕೆಂದರೆ, ಉತ್ತರ ಕರ್ನಾಟಕದ ಸೀಮಿತ ಪರಿಧಿಯಲ್ಲಿ ಈತ ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದಾರೆ. ಆನರ ಪ್ರೀತಿಯನ್ನೂ ಗಳಿಸಿಕೊಂಡಿದ್ದಾರೆ. ಅದೆಲ್ಲದರ ಫಲವೆಂಬಂತೆ ಇದೀಗ ಕನ್ನಡ ಚಿತ್ರರಂಗಕ್ಕೆ (chola kannada mvie) ಚೋಳನ ಅವತಾರದಲ್ಲಿ ಅಂಜನ್ ಎಂಟ್ರಿ ಕೊಟ್ಟಿದ್ದಾರೆ. ಅದಕ್ಕೆ ಕಾರಣರಾಗಿರುವವರು ಕನ್ನಡ ಚಿತ್ರರಂಗದ ಸದಭಿರುಚಿಯ ನಿರ್ಮಾಪಕ, ನಿರ್ದೇಶಕ (suresh d.m) ಸುರೇಶ್ ಡಿ.ಎಂ!

    ನಿಮಗೆ ನೆನಪಿರಬಹುದು; ವರ್ಷಾಂತರಗಳ ಹಿಂದೆ ರಣಹೇಡಿ, ಪ್ರಯಾಣಿಕರ ಗಮನಕ್ಕೆ ಎಂಬೆರಡು ಸಿನಿಮಾಗಳು ತೆರೆಗಂಡಿದ್ದವು. ಸೋಲು ಗೆಲುವಿನಾಚೆಗೆ ಹೊಸತನ ಮತ್ತು ಪ್ರಯೋಗಾತ್ಮಕ ಗುಣಗಳ ಕಾರಣದಿಂದ ಗಮನ ಸೆಳೆದಿದ್ದವು. ಆ ಎರಡೂ ಚಿತ್ರಗಳನ್ನು ನಿರ್ಮಾಣ ಮಾಡಿದ್ದವರು ಸುರೇಶ್ ಡಿ.ಎಂ. ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಅನ್ನೋದು ಪಕ್ಕಾ ವ್ಯವಹಾರ ಎಂಬ ನಂಬಿಕೆ ಇದೆ. ಅಂಥಾ ವ್ಯಾವಹಾರಿಕ ಜಗತ್ತಿಗೆ ಕ್ರಿಯೇಟಿವ್ ವಿಚಾರಗಳು ತಾಕೋದೂ ತುಸು ಕಷ್ಟ. ಆದರೆ, ಸುರೇಶ್ ಆ ಎರಡು ಸಿನಿಮಾಗಳ ಅವಧಿಯಲ್ಲಿ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಾ, ಚೆಂದದ್ದೊಂದು ಕಥೆ ರೆಡಿ ಮಾಡಿಕೊಂಡು ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಗ್ರಾಮೀಣ ಭಾಗದ ಅಪ್ಪಟ ಪ್ರತಿಭೆ ಅಂಜನ್ ನನ್ನು ನಾಯಕನನ್ನಾಗಿಸಿದ್ದಾರೆ. ಇದೀಗ ಚಿತ್ರೀಕರಣದ ಹಂತದಲ್ಲಿರುವ ಚೋಳ ಚಿತ್ರದ ಟೀಸರ್ ಇದೇ ಆಗಸ್ಟ್ ೨೦ರಂದು ಬಿಡುಗಡೆಗೊಳ್ಳಲಿದೆ.

    ಹಾಗಾದರೆ, ಈ ಸಿನಿಮಾ ಯಾವ ಬಗೆಯದ್ದು? ಶೀರ್ಷಿಕೆಯೇ ಚೋಳ ಅಂತಿರುವುದರಿಂದ, ಇದು ಐತಿಹಾಸಿಕ ಅಂಶಗಳನ್ನು ಒಳಗೊಂಡಿರುವ ಚಿತ್ರವಾ ಎಂಬಂಥಾ ಪ್ರಶ್ನೆಗಳು ಕಾಡೋದು ಸಹಜ. ಬಗ್ಗೆ ನಿರ್ದಕರು ಒಂದಷ್ಟು ಕುತೂಹಲಕರವಾದ ಅಂಶಗಳನ್ನು ತೆರೆದಿಟ್ಟಿದ್ದಾರೆ. ಅದರನ್ವಯ ಹೇಳೋದಾದರೆ, ಚೋಳ ಎಂಬುದು ಪಕ್ಕಾ ಮಾಸ್ ಚಿತ್ರ. ಪ್ರೀತಿ, ರೌಡಿಸಂ ಸೇರಿದಂತೆ ಅನೇಕ ಅಂಶಗಳು ಈ ಕಥೆಯಲ್ಲಿ ಮಿಳಿತವಾಗಿವೆಯಂತೆ. ಆದರೆ, ಒಟ್ಟಾರೆ ಸಿನಿಮಾ ಭಿನ್ನವಾಗಿರಲಿದೆ ಎಂಬ ಭರವಸೆಯೂ ನಿರ್ದೇಶಕರಲ್ಲಿದೆ. ಅಂದಹಾಗೆ, ಈ ಚಿತ್ರದಲ್ಲಿ ರೂರರಲ್ ಸ್ಟಾರ್ ಅಂಜನ್‌ಗೆ ಇಬ್ಬರು ನಾಯಕಿಯರ ಸಾಥ್ ಕೊಟ್ಟಿದ್ದಾರೆ. ದಿಶಾ ಪಾಂಡೆ ಮತ್ತು ಪ್ರತಿಭಾ ನಾಯಕಿಯರಾಗಿ ನಟಿಸಿದ್ದಾರೆ.

    ತನ್ನ ಸೃಷ್ಟಿ ಎಂಟರ್‌ಪ್ರೈಸಸ್ ಬ್ಯಾನರಿನಡಿಯಲ್ಲಿ ಸುರೇಶ್ ಡಿ.ಎಂ ಚೋಳ ಚಿತ್ರವನ್ನು ನಿರ್ಮಾಣ ಮಾಡಿ, ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದಾರೆ. ಯರ್ರಾಬಿರ್ರಿ ಅಂತೊಂದು ಸಿನಿಮಾ ಮಾಡಿದ್ದ ರೂರಲ್ ಸ್ಟಾರ್ ಅಂಜನ್‌ರ ಪ್ರತಿಭೆಯನ್ನು ಗಮನಿಸಿದ್ದ ನಿರ್ದೇಶಕ ಸುರೇಶ್ ಈ ಚಿತ್ರಕ್ಕೆ ನಾಯಕನನ್ನಾಗಿಸಿದ್ದಾರೆ. ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ದಿಶಾ ಪಾಂಡೆ ಮತ್ತು ಪ್ರತತಿಭಾ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ. ದಿನೇಶ್ ಮಂಗಳೂರು ಮತ್ತು ರಾಜ ಬಲವಾಡಿ ವಿಲನ್ನುಗಳಾಗಿ ನಟಿಸಿದ್ದಾರೆ ಮನಮೋಹನ್ ರಾಯ್ ರಂಥ ಹಿರಿಯ ನಟರು ವಿಶೇಷಪಾತ್ರಗಳನ್ನು ನಿಭಾಯಿಸಿದ್ದಾರೆ. ಮಜಾ ಭಾರತ ಖ್ಯಾತಿಯ ಜಗಪ್ಪ, ಮಿಂಚು, ವರ್ಧನ್ ತೀರ್ಥಹಳ್ಳಿ ಮುಂತಾದವರ ತಾರಾಗಣ, ಸಂದೀಪ್ ಹೊನ್ನಾಳ್ಳಿ ಛಾಯಾಗ್ರಹಣ, ಶಿವಶಂಕರ್ ಸಂಕಲನ ಈ ಚಿತ್ರಕ್ಕಿದೆ.

    ಯರ್ರಾಬಿರ್ರಿ ಅಂತೊಂದು ಚಿತ್ರದಲ್ಲಿ ಅಂಜನ್ ನಟನೆ ನೋಡಿ ಮೆಚ್ಚಿಕೊಂಡೇ ಸುರೇಶ್ ಆತನನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ನಿರ್ಮಾಪಕನಾಗಿ ದಕ್ಕಿಸಿಕೊಂಡ ಅನುಭವದ ಆಧಾರದಲ್ಲಿಯೇ ಈ ಚಿತ್ರವನ್ನವರು ಅಚ್ಚುಕಟ್ಟಾಗಿ ಪೊರೆದಿದ್ದಾರಂತೆ. ಇನ್ನುಳಿದಂತೆ, ಯೋಜನೆಯ ಪ್ರಕಾರವೇ ಚೋಳ ಯಶಸವಿಯಾಗಿ ಒಂದಷ್ಟು ಚಿತ್ರೀಕರಣ ಮುಗಿಸಿಕೊಂಡಿದೆ. ಬಹುಮುಖ್ಯ ಭಾಗಗಳ ಚಿತ್ರೀಕರಣ ಬಾಕಿ ಉಳಿದುಕೊಂಡಿದೆ. ಅನ್ನು ಬೇಗನೆ ಮುಗಿಸಿಕೊಂಡು, ಆಡಿಯೋ ಲಾಂಚ್ ಮಾಡುವ ನಿರ್ಧಾರ ಸುರೇಶ್ ಅವರದ್ದು. ಹಾಗೆ ಧ್ವನಿಸುರುಳಿಯ ನಂತರ ಟ್ರೈಲರ್ ಲಾಂಚ್ ಆಗಲಿದೆ. ಆಗಸ್ಟ್ ಇಪ್ಪತ್ತರಂದು ಬಿಡುಗಡೆಗೊಳ್ಳಲಿರುವ ಟೀಸರ್ ಚೋಳನ ಬಗೆಗಿನ ಒಂದಷ್ಟು ಅಂಶಗಳನ್ನು ಜಾಹೀರು ಮಾಡುವ ನಿರೀಕ್ಷೆಗಳಿದ್ದಾವೆ!

    cholamovie cholateaser cinishodha kfi ruralstaranjan sandalwood sureshdm
    Share. Facebook Twitter LinkedIn WhatsApp Telegram Email
    Previous Articleleo movie updates: ಲೋಕೇಶ್ ಕನಕರಾಜ್ ಆಲೋಚನೆಯೇ ಬೇರೆ!
    Next Article chef chidambara: ಚೆಫ್ ಚಿದಂಬರನಾಗಿ ಎದ್ದು ನಿಲ್ತಾರಾ ಅನಿರುದ್ಧ್ ಜಟ್ಕರ್?
    Santhosh Bagilagadde

    Santhosh Bagilagadde is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Santhosh has worked in reputed publications like Hi Bangalore, Agni, Lankesh Patrike and Himagni.

    Related Posts

    sangeetha sringeri: ರಕ್ಷಿತ್ ಶೆಟ್ಟಿ ಹೀರೋಯಿನ್ ಹೀಗೇಕಾದಳು?

    01/07/2025

    neethu vanajakshi: ಬಿಗ್ ಬಾಸ್ ನ ಅಸಲೀ ಆಕರ್ಷಣೆ ನೀತು ವನಜಾಕ್ಷಿ!

    01/07/2025

    kapata nataka sutradhari trailer review: ಚರ್ಚೆಗೆ ಗ್ರಾಸವಾಯ್ತು ಕಪಟ ನಾಟಕ ಸೂತ್ರಧಾರಿ ಟ್ರೈಲರ್!

    20/06/2025
    Search
    Category
    • OTT (3)
    • ಕಿರುತೆರೆ ಕಿಟಕಿ (3)
    • ಜಾಪಾಳ್ ಜಂಕ್ಷನ್ (21)
    • ಟೇಕಾಫ್ (7)
    • ಬಣ್ಣದ ಹೆಜ್ಜೆ (19)
    • ಬಾಲಿವುಡ್ (56)
    • ಸೌತ್ ಜೋನ್ (98)
    • ಸ್ಪಾಟ್ ಲೈಟ್ (172)
    • ಹಾಲಿವುಡ್ (2)
    • ಹೀಗಿದೆ ಈ ಪಿಚ್ಚರ್ (10)
    Recommended Host
    ಶೋಧ ನ್ಯೂಸ್ ಗೆ ಭೇಟಿ ನೀಡಿ
    Shodha News
    Top Posts

    mavalli karthik: ರಂಗಭೂಮಿ ನಟನ ಸಿನಿಮಾ-ಮಾಧ್ಯಮ ಯಾನ!

    21/11/202331 Views

    bhajarangi loki: ಅಬ್ಬರಿಸೋ ಲೋಕಿಗೆ ಸಿಕ್ಕಿದ್ದು ಎಂಥಾ ಪಾತ್ರ?

    30/05/202525 Views

    arjun krishna is no more: ಅದು ನಿರ್ದೇಶಕನಾಗಲೆಂದೇ ಹುಟ್ಟಿದಂತಿದ್ದ ಆಪ್ತ ಜೀವ!

    09/03/202520 Views

    padmagandhi movie: ಮುಂಗಾರಿಗೆ ಸಾಥ್ ಕೊಡಲಿದೆ ಗೀತ ಗುಚ್ಛ!

    12/06/202513 Views
    Don't Miss
    ಸ್ಪಾಟ್ ಲೈಟ್ 01/07/2025

    sangeetha sringeri: ರಕ್ಷಿತ್ ಶೆಟ್ಟಿ ಹೀರೋಯಿನ್ ಹೀಗೇಕಾದಳು?

    777 ಚಾರ್ಲಿ ಚಿತ್ರದಲ್ಲಿ (simple star rakshith shetty) ರಕ್ಷಿತ್ ಶೆಟ್ಟಿ ಜೊತೆ ನಾಯಕಿಯಾಗಿ ನಟಿಸಿದ್ದವರು (actress sangeetha sringeri)…

    neethu vanajakshi: ಬಿಗ್ ಬಾಸ್ ನ ಅಸಲೀ ಆಕರ್ಷಣೆ ನೀತು ವನಜಾಕ್ಷಿ!

    kapata nataka sutradhari trailer review: ಚರ್ಚೆಗೆ ಗ್ರಾಸವಾಯ್ತು ಕಪಟ ನಾಟಕ ಸೂತ್ರಧಾರಿ ಟ್ರೈಲರ್!

    kajol devgan: ಬಿಟ್ಟಿ ಪ್ರಚಾರಕ್ಕೆ ದೆವ್ವವೇ ಗತಿ!

    Stay In Touch
    • Facebook
    • Instagram
    • YouTube
    • WhatsApp

    Subscribe to Updates

    Get the latest creative news from Cini Shodha about Media and Entertainment

    Digicube Solutions
    ನಮ್ಮ ಬಗ್ಗೆ

    ಈ ನಾಡಿನಲ್ಲಿ ಹೆಸರಾಗಿರುವ ಹಾಯ್ ಬೆಂಗಳೂರ್, ಅಗ್ನಿ, ಲಂಕೇಶ್ ಪತ್ರಿಕೆ, ಹಿಮಾಗ್ನಿ ಮಂತಾದ ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ, ತಮ್ಮದೇ ಆದ ಛಾಪು ಮೂಡಿಸಿರುವವರು ಪತ್ರಕರ್ತ ಸಂತೋಷ್ ಬಾಗಿಲಗದ್ದೆ. ರಾಜಕೀಯ, ಅಪರಾಧ, ಸಿನಿಮಾ ಸೇರಿದಂತೆ ತನಿಖಾ ಪತ್ರಿಕೋದ್ಯಮದಲ್ಲಿ ದಶಕಗಳಿಗೂ ಹೆಚ್ಚು ಕಾಲ ಪಳಗಿಕೊಂಡು, ಅನೇಕ ಭ್ರಷ್ಟರನ್ನು ಬಯಲಾಗಿಸಿರುವ ಬಾಗಿಲಗದ್ದೆ ಆರಂಭಿಸಿರುವ ವಿಭಿನ್ನ ಡಿಜಿಟಲ್ ಹೆಜ್ಜೆ ಶೋಧ ಮತ್ತು ಸಿನಿ ಶೋಧ. ಇದು ಹೊಸಾ ಆಯಾಮದ ಪತ್ರಿಕೋದ್ಯಮ. ಸತ್ಯದ ಭೂಮಿಕೆಯ ನೇರ-ನಿಷ್ಠುರ ವರದಿಗಳ ಸಂಕಲ್ಪದೊಂದಿಗೆ, ಭಿನ್ನ ಶೈಲಿಯ ಬರವಣಿಗೆಯ ಮೂಲಕ ಹೊಸತೊಂದು ಜಗತ್ತು ನಿಮ್ಮೆದುರು ನಿರಂತವಾಗಿ ತೆರೆದುಕೊಳ್ಳಲಿದೆ; ಅಚ್ಚರಿಗೀಡುಮಾಡಲಿದೆ!
    ಅಂದಹಾಗೆ, ಇಲ್ಲಿ ಪ್ರಕಟವಾಗೋ ಯಾವುದೇ ಬರಹಗಳನ್ನು ಯಾರೂ ಭಟ್ಟಿ ಇಳಿಸುವಂತಿಲ್ಲ. ಅಂಥಾ ಕಳವು ವೃತ್ತಾಂತ ಗಮನಕ್ಕೆ ಬಂದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

    All Rights Reserved by dreamwings media
    Email: dreamwingsmedia@gmail.com

    Facebook Twitter YouTube WhatsApp
    Most Popular

    actress romola: ರಿಚ್ಚಿ ಹುಡುಗಿಯ ಮುಂದೆ ಅವಕಾಶಗಳ ಮೆರವಣಿಗೆ!

    26/05/20230 Views

    diganth: ಸತಾಯಿಸಿದನೇ ಪರಮ ಸೋಂಭೇರಿ?

    26/05/20230 Views

    jeevasakhi: ಕಿರುಚಿತ್ರದೊಂದಿಗೆ ಪರೀಕ್ಷೆಗೊಡ್ಡಿಕೊಂಡ ಸಂಗಮೇಶ್ ಪಾಟೀಲ್!

    01/06/20230 Views
    Copyrights © 2022 - 25, All Rights Reserved by Cini Shodha | Developed by: DIGICUBE SOLUTIONS

    Type above and press Enter to search. Press Esc to cancel.