Close Menu
Cini ShodhaCini Shodha

    Subscribe to Updates

    Get the latest creative news from FooBar about art, design and business.

    What's Hot

    Nishvika Naidu: ಮಾರ್ಕ್ ಮೂಲಕ ಖುಲಾಯಿಸಿತಾ ಅದೃಷ್ಟ?

    rajinikanth movie: ಮಹಿಳಾ ನಿರ್ದೇಶಕಿಯ ಕಥೆಗೆ ರಜನಿ ಒಪ್ಪಿಗೆ?

    Pyaar Kannada #1 Movie: ಪ್ರೇಮಕಥನಕ್ಕೆ ಕನಸುಗಾರನ ಸಾಥ್!

    Facebook X (Twitter) Instagram
    Cini ShodhaCini Shodha
    • ಮುಖಪುಟ
    • ಸ್ಪಾಟ್ ಲೈಟ್
    • ಟೇಕಾಫ್
    • ಜಾಪಾಳ್ ಜಂಕ್ಷನ್
    • ಎಡಿಟೋರಿಯಲ್
    • ಬಣ್ಣದ ಹೆಜ್ಜೆ
    • ಕಿರುತೆರೆ ಕಿಟಕಿ
    • ಹೀಗಿದೆ ಈ ಪಿಚ್ಚರ್
    • ಕಲರ್ ಜೋನ್
      • ಬಾಲಿವುಡ್
      • ಹಾಲಿವುಡ್
      • ಸೌತ್ ಜೋನ್
    • OTT
    Facebook X (Twitter) Instagram
    Cini ShodhaCini Shodha
    You are at:Home»ಸ್ಪಾಟ್ ಲೈಟ್»o manase: ಮಾಸ್ ಮೂಡಲ್ಲಿ ಮುಗ್ಗರಿಸಿದ ಧರ್ಮನ ಕ್ಲಾಸ್ ಕಥನ!
    ಸ್ಪಾಟ್ ಲೈಟ್

    o manase: ಮಾಸ್ ಮೂಡಲ್ಲಿ ಮುಗ್ಗರಿಸಿದ ಧರ್ಮನ ಕ್ಲಾಸ್ ಕಥನ!

    By Santhosh Bagilagadde12/07/2023
    Facebook Twitter Telegram Email WhatsApp
    fc117789 3d4a 4108 88bb 095d70ff6b10
    Share
    Facebook Twitter LinkedIn WhatsApp Email Telegram

    ಸಿನಿಮಾ ಎಂಬ ಮಾಯಕದ ಜಗತ್ತಿನಲ್ಲಿ ಸೋಲು ಗೆಲುವುಗಳ ಅಳತೆಗೋಲು ಕೆಲವೊಮ್ಮೆ ಅಂದಾಜಿಗೆ ನಿಲುಕುವುದಿಲ್ಲ. ನಟ, ನಟಿಯರಾಗಿ ನೆಲೆ ಕಂಡುಕೊಳ್ಳುವ ಎಲ್ಲ ಅರ್ಹತೆ, ಪ್ರತಿಭೆ (talent) ಇದ್ದವರನ್ನೂ ಗೆಲುವೆಂಬುದು ಹೀನಾಯವಾಗಿ ಸತಾಯಿಸಿ ಬಿಡುತ್ತದೆ. ಇಂಥಾ ದುರಂತ ನಾಯಕರ ಪಟ್ಟಿಯೊಂದಿದೆ. ಆ ಸಾಲಿನಲ್ಲಿ ದುರಂತವೆಂಬಂತೆ (vijay raghavendra) ವಿಜಯ್ ರಾಘವೇಂದ್ರ ಕೂಡಾ ಸೇರಿಕೊಳ್ಳುತ್ತಾರೆ. ದೊಡ್ಮನೆ ಕುಟುಂಬದ ಕುಡಿ ಎಂಬುದರಾಚೆಗೆ ರಾಘು ತನ್ನ ನಟನಾ ಪ್ರತಿಭೆಯಿಂದಲೇ ಪ್ರೇಕ್ಷಕರನ್ನು ಆವರಿಸಿಕೊಂಡಿದ್ದರು. ಆದರೆ, ಅದೇಕೋ ಮುಖ್ಯನಾಯಕರ ಸಾಲಿನಲ್ಲಿ ಭದ್ರವಾಗಿ ನೆಲೆ ಕಂಡುಕೊಳ್ಳಲು ಸಾಧ್ಯವಾಗಲೇ ಇಲ್ಲ. ಆದರೆ, ಇದೆಲ್ಲದರಾಚೆಗೂ ರಾಘುವಿನ (vijay raghavendra) ಪ್ರಯತ್ನ ಚಾಲ್ತಿಯಲ್ಲಿದೆ. ಅದರ ಭಾಗವಾಗಿಯೇ ಇದೀಗ `ಓ ಮನಸೇ’ (o manase)  ಎಂಬ ಸಿನಿಮಾ ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿಕೊಂಡಿದೆ!

    images 5ಹಾಗೆ ನೋಡಿದರೆ, ವಿಜಯ್ ರಾಘವೇಂದ್ರ (vijay raghavendra) ಸೋಲು ಗೆಲುವಿನಚೆಗೆ ಪ್ರಯತ್ನವನ್ನು ಸದಾ ಚಾಲ್ತಿಯಲ್ಲಿಟ್ಟಿದ್ದಾರೆ. ಸಿನಿಮಾ ಸೋತರೂ ನಟನೆಯೆಂಬುದು ಪ್ರೇಕ್ಷಕರ ಮನಸಲ್ಲುಳಿಯುವಂಥಾ ಎಚ್ಚರವೊಂದನ್ನು ಸದಾ ಕಾಪಿಟ್ಟಕೊಂಡು ಬಂದಿದ್ದಾರೆ. ಅದರ ಫಲವಾಗಿಯೇ ಅವರು ನಟಿಸಿದ ಸಿನಿಮಾಗಳು ನಿರೀಕ್ಷಿತ ಗೆಲುವು ಕಾಣದಿದ್ದರೂ, ರಾಘುವಿನ ನಟನೆಗೆ ಮಾತ್ರ ಫುಲ್ ಮಾಕ್ರ್ಸ್ ಸಿಗುತ್ತಲೇ ಬಂದಿದೆ. ಇತ್ತೀಚಿನ ವರ್ಷಗಳಲ್ಲಿ ಭಿನ್ನ ಕಥೆ, ಪ್ರಯೋಗಾತ್ಮಕ ಪಾತ್ರಗಳಿಗೂ ಒಡ್ಡಿಕೊಂಡಿರುವ ರಾಘು ಒಂದಷ್ಟು ಚಾಲ್ತಿಯಲ್ಲಿದ್ದಾರೆ. ಅತ್ತ ಕಿರುತೆರೆಯ ರಿಯಾಲಿಟಿ ಶೋಗಳಲ್ಲಿ ಬ್ಯುಸಿಯಾಗುತ್ತೇ, ಇತ್ತ ಓ ಮನಸೇ ಚಿತ್ರವನ್ನವರು ಬಹುತೇಕ ಮುಗಿಸಿಕೊಂಡಿದ್ದಾರೆ.

    bg omanaseಅವರೇ ಹೇಳಿಕೊಂಡಿರುವ ಮಾತುಗಳನ್ನು ಆಧರಿಸಿ ಹೇಳೋದಾದರೆ, ಈ ಸಿನಿಮಾದ ಕಥೆ ಕೊಂಚ ವಿಶೇಷವಾಗಿದೆ. ತ್ರಿಕೋನ ಪ್ರೇಮ ಕಥೆಯನ್ನೊಳಗೊಂಡಿದ್ದರೂ ಶಿಕ್ಷಣ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಸಾಮಾಜಿಕ ಕಾಳಜಿಯೂ ಈ ಕಥೆಯಲ್ಲಿ ಅಡಕವಾಗಿದೆಯಂತೆ. ತನ್ನ ಪಾತ್ರದ ಬಗ್ಗೆಯೂ ರಾಘವೇಂದ್ರ ಒಳಗೊಂದು ಖುಷಿ ಇದ್ದಂತಿದೆ. ಅಂದಹಾಗೆ, ಈ ಚಿತ್ರವನ್ನು ಉಮೇಶ್ ಗೌಡ ನಿರ್ದೇಶನ ಮಾಡಿದ್ದಾರೆ. ನಾಲ್ವರು ಗೆಣೆಕಾರರು ಸೇರಿಕೊಂಡು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಾವ ಗೌಜು ಗದ್ದಲವೂ ಇಲ್ಲದೇ, ಸುಸೂತ್ರವಾಗಿ ಚಿತ್ರೀಕರಣ ಮುಗಿಸಿಕೊಂಡಿರುವ ಖುಷಿ ಚಿತ್ರತಂಡದಲ್ಲಿದೆ.

    dಮತ್ತೊಂದು ವಿಶೇಷವೆಂದರೆ, ಈ ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ಕೂಡಾ ನಾಯಕರಲ್ಲೊಬ್ಬರಾಗಿ ನಟಿಸಿದ್ದಾರೆ. ಕನ್ನಡ ಚಿತ್ರರಂಗ ಕಂಡ ಪ್ರತಿಭಾನ್ವಿತ ಕಲಾವಿದರಾದ ಕೀರ್ತಿರಾಜ್ ಪುತ್ರನಾದ ಧರ್ಮ ಕೂಡಾ ನತದೃಷ್ಟ ನಟ. ಯಾಕೆಂದರೆ, ಒಂದಷ್ಟು ಅವಕಾಶಗಳು ಸಿಕ್ಕರೂ ಕೂಡಾ ಅಂದುಕೊಂಡಂತೆ ಮಿಂಚಲು ಸಾಧ್ಯವಾಗಿಲ್ಲ. ಇದುವರೆಗೂ ಮಾಸ್ ಮೂಡಲ್ಲಿ ಹ್ಞೂಂಕರಿಸಿ ಮುಗ್ಗರಿಸಿರುವ ಧರ್ಮನ ಲಕ್ಕು ಈ ಸಿನಿಮಾ ಮೂಲಕವಾದರೂ ಕುದುರಬಹುದಾದ ಸಾಧ್ಯತೆಗಳಿದ್ದಾವೆ. ಇನ್ನುಳಿದಂತೆ ಬಹು ಕಾಲದಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಸಂಚಿತಾ ಪಡುಕೋಣೆ ಈ ಚಿತ್ರದ ನಾಯಕಿ. ಹರೀಶ್ ರಾಯ್, ಶೋಭರಾಜ್, ಸಾಧ ಕೋಕಿಲಾ, ಕಿಲ್ಲರ್ ವೆಂಕಟೇಶ್, ರುಶಿಕ, ವಾಣಿಶ್ರೀ, ಜಯರಾಂ ಮುಂತಾದವರ ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ.

    #kannadamovie cinishodha dharmakeerthiraj kfi omanase sanchitapadukone sandalwood vijayraghavendra
    Share. Facebook Twitter LinkedIn WhatsApp Telegram Email
    Previous Articlevaishnavi gowda: ಮತ್ತೆ ಕಿರುತೆರೆಗೆ ಮರಳಿದಳು ಅಗ್ನಿಸಾಕ್ಷಿ ಸನ್ನಿಧಿ!
    Next Article hostelhudugaru bekagiddare: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ
    Santhosh Bagilagadde

    Santhosh Bagilagadde is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Santhosh has worked in reputed publications like Hi Bangalore, Agni, Lankesh Patrike and Himagni.

    Related Posts

    Nishvika Naidu: ಮಾರ್ಕ್ ಮೂಲಕ ಖುಲಾಯಿಸಿತಾ ಅದೃಷ್ಟ?

    02/01/2026

    Pyaar Kannada #1 Movie: ಪ್ರೇಮಕಥನಕ್ಕೆ ಕನಸುಗಾರನ ಸಾಥ್!

    01/01/2026

    Chaithra Achar New Movie : ಭಿನ್ನ ಬಗೆಯ ಪಾತ್ರದಲ್ಲಿ ಮಿಂಚಲಣಿಯಾದ ಚೈತ್ರಾ!

    01/01/2026
    Search
    Category
    • Cinema (5)
    • OTT (4)
    • ಕಿರುತೆರೆ ಕಿಟಕಿ (5)
    • ಜಾಪಾಳ್ ಜಂಕ್ಷನ್ (37)
    • ಟೇಕಾಫ್ (10)
    • ಬಣ್ಣದ ಹೆಜ್ಜೆ (25)
    • ಬಾಲಿವುಡ್ (81)
    • ಸೌತ್ ಜೋನ್ (138)
    • ಸ್ಪಾಟ್ ಲೈಟ್ (218)
    • ಹಾಲಿವುಡ್ (2)
    • ಹೀಗಿದೆ ಈ ಪಿಚ್ಚರ್ (20)
    Recommended Host
    ಶೋಧ ನ್ಯೂಸ್ ಗೆ ಭೇಟಿ ನೀಡಿ
    Shodha News
    Top Posts

    mavalli karthik: ರಂಗಭೂಮಿ ನಟನ ಸಿನಿಮಾ-ಮಾಧ್ಯಮ ಯಾನ!

    21/11/202332 Views

    bhajarangi loki: ಅಬ್ಬರಿಸೋ ಲೋಕಿಗೆ ಸಿಕ್ಕಿದ್ದು ಎಂಥಾ ಪಾತ್ರ?

    30/05/202526 Views

    Jailer2 Movie Updates: ಆಮೀರ್ ಖಾನ್ ಕಾಮಿಡಿ ಪೀಸಾಗಿದ್ದ ಫ್ಲಾಶ್‌ಬ್ಯಾಕ್!

    05/12/202521 Views

    arjun krishna is no more: ಅದು ನಿರ್ದೇಶಕನಾಗಲೆಂದೇ ಹುಟ್ಟಿದಂತಿದ್ದ ಆಪ್ತ ಜೀವ!

    09/03/202520 Views
    Don't Miss
    ಸ್ಪಾಟ್ ಲೈಟ್ 02/01/2026

    Nishvika Naidu: ಮಾರ್ಕ್ ಮೂಲಕ ಖುಲಾಯಿಸಿತಾ ಅದೃಷ್ಟ?

    ಕೆಲ ನಟಿಯರು ಒಂದೇ ಒಂದು ಸಿನಿಮಾ ಮೂಲಕ ಸ್ಟಾರುಗಿರಿ ಪಡೆದು ಮೆರೆದುಬಿಡುತ್ತಾರೆ. ನೋಡ ನೋಡುತ್ತಲೇ ಬೇರೆ ಭಾಷೆಗಳಿಗೂ ಹಾರಿ ಮಿರಮಿರ…

    rajinikanth movie: ಮಹಿಳಾ ನಿರ್ದೇಶಕಿಯ ಕಥೆಗೆ ರಜನಿ ಒಪ್ಪಿಗೆ?

    Pyaar Kannada #1 Movie: ಪ್ರೇಮಕಥನಕ್ಕೆ ಕನಸುಗಾರನ ಸಾಥ್!

    Jananayagan Trailer : ರೀಮೇಕ್ ಸರಕು ಹೇಗಿದ್ದೀತೆಂಬ ಕೌತುಕ!

    Stay In Touch
    • Facebook
    • Instagram
    • YouTube
    • WhatsApp
    Tags
    #actress (18) #alluarjun (8) #bilichukkihallihakki (8) #bilichukkihallihakkimovie (6) #gunsandrosesmovie) (6) #kannadamovie (11) #kiccha (6) #maheshgowda (7) #pavithragowda (8) #renukaswamymurdercase (10) 'santhoshbagilagadde (7) bahubali (8) bannadahejje (17) biggbosskannada (6) bollywood (74) challengingstardarshan (10) cinishodha (139) cinishodhareview (16) coolie (6) crime (8) darshan (18) jailer (8) kanthara (7) kerebete_gowrishankar_titlesong_kfi_byvijayendra_shivamogga_sandalwood_kfi_cinishodha (10) kfi (170) kgf (8) kicchasudeep (11) kicchasudeepa (6) krishnegowda (6) lifestory (19) mollywood (10) pawankalyan (8) pinkielli (5) prabhas (19) prashanthneel (7) rajani (6) rajanikanth (12) rashmikamandanna (9) ravike_prasanga_kannadamovie_geethabharathibhat_santhoshkodenkeri_kfi_sandalwood_cinishodha (7) rip (6) rukminivasanth (7) sandalwood (198) shivarajkumar (9) tollywood (60) yash (11)
    ನಮ್ಮ ಬಗ್ಗೆ

    ಈ ನಾಡಿನಲ್ಲಿ ಹೆಸರಾಗಿರುವ ಹಾಯ್ ಬೆಂಗಳೂರ್, ಅಗ್ನಿ, ಲಂಕೇಶ್ ಪತ್ರಿಕೆ, ಹಿಮಾಗ್ನಿ ಮಂತಾದ ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ, ತಮ್ಮದೇ ಆದ ಛಾಪು ಮೂಡಿಸಿರುವವರು ಪತ್ರಕರ್ತ ಸಂತೋಷ್ ಬಾಗಿಲಗದ್ದೆ. ರಾಜಕೀಯ, ಅಪರಾಧ, ಸಿನಿಮಾ ಸೇರಿದಂತೆ ತನಿಖಾ ಪತ್ರಿಕೋದ್ಯಮದಲ್ಲಿ ದಶಕಗಳಿಗೂ ಹೆಚ್ಚು ಕಾಲ ಪಳಗಿಕೊಂಡು, ಅನೇಕ ಭ್ರಷ್ಟರನ್ನು ಬಯಲಾಗಿಸಿರುವ ಬಾಗಿಲಗದ್ದೆ ಆರಂಭಿಸಿರುವ ವಿಭಿನ್ನ ಡಿಜಿಟಲ್ ಹೆಜ್ಜೆ ಶೋಧ ಮತ್ತು ಸಿನಿ ಶೋಧ. ಇದು ಹೊಸಾ ಆಯಾಮದ ಪತ್ರಿಕೋದ್ಯಮ. ಸತ್ಯದ ಭೂಮಿಕೆಯ ನೇರ-ನಿಷ್ಠುರ ವರದಿಗಳ ಸಂಕಲ್ಪದೊಂದಿಗೆ, ಭಿನ್ನ ಶೈಲಿಯ ಬರವಣಿಗೆಯ ಮೂಲಕ ಹೊಸತೊಂದು ಜಗತ್ತು ನಿಮ್ಮೆದುರು ನಿರಂತವಾಗಿ ತೆರೆದುಕೊಳ್ಳಲಿದೆ; ಅಚ್ಚರಿಗೀಡುಮಾಡಲಿದೆ!
    ಅಂದಹಾಗೆ, ಇಲ್ಲಿ ಪ್ರಕಟವಾಗೋ ಯಾವುದೇ ಬರಹಗಳನ್ನು ಯಾರೂ ಭಟ್ಟಿ ಇಳಿಸುವಂತಿಲ್ಲ. ಅಂಥಾ ಕಳವು ವೃತ್ತಾಂತ ಗಮನಕ್ಕೆ ಬಂದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

    All Rights Reserved by dreamwings media
    Email: dreamwingsmedia@gmail.com

    Facebook X (Twitter) YouTube WhatsApp
    Most Popular

    jeevasakhi: ಕಿರುಚಿತ್ರದೊಂದಿಗೆ ಪರೀಕ್ಷೆಗೊಡ್ಡಿಕೊಂಡ ಸಂಗಮೇಶ್ ಪಾಟೀಲ್!

    01/06/20230 Views

    samantha ruth prabhu: ನೋವಿನ ಬಳಿಕ ಕಣ್ತೆರೆಯಿತು ನಲಿವಿನ ಪರ್ವ!

    02/06/20230 Views

    pinki elli review: ಅಬ್ಬರವಿಲ್ಲದೆ ಆದ್ರ್ರಗೊಳಿಸುವ ಅಪರೂಪದ ಚಿತ್ರ!

    03/06/20230 Views
    Copyrights © 2022 - 26, All Rights Reserved by Cini Shodha | Developed by: DIGICUBE SOLUTIONS |
    Follow us on

    Type above and press Enter to search. Press Esc to cancel.