<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	 xmlns:media="http://search.yahoo.com/mrss/" >

<channel>
	<title>#renukaswamymurder &#8211; Cini Shodha</title>
	<atom:link href="https://www.cinishodha.com/tag/renukaswamymurder/feed/" rel="self" type="application/rss+xml" />
	<link>https://www.cinishodha.com</link>
	<description>Filmi News Online - Kannada</description>
	<lastBuildDate>Wed, 20 Aug 2025 13:35:15 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.9.4</generator>

<image>
	<url>https://www.cinishodha.com/wp-content/uploads/2025/11/cropped-cinishodha-icon-32x32.png</url>
	<title>#renukaswamymurder &#8211; Cini Shodha</title>
	<link>https://www.cinishodha.com</link>
	<width>32</width>
	<height>32</height>
</image> 
	<item>
		<title>darshan controversy: ನಡೆದಿದೆಯಾ ಬಡಪಾಯಿಗಳನ್ನು ಬಲಿಹಾಕೋ ಷಡ್ಯಂತ್ರ?</title>
		<link>https://www.cinishodha.com/darshan-controversy-20-08-2025/</link>
		
		<dc:creator><![CDATA[Santhosh Bagilagadde]]></dc:creator>
		<pubDate>Wed, 20 Aug 2025 13:35:15 +0000</pubDate>
				<category><![CDATA[ಸ್ಪಾಟ್ ಲೈಟ್]]></category>
		<category><![CDATA[#darshanupdates]]></category>
		<category><![CDATA[#pavithragowda]]></category>
		<category><![CDATA[#renukaswamymurder]]></category>
		<category><![CDATA[#renukaswamymurdercase]]></category>
		<category><![CDATA[darshan]]></category>
		<category><![CDATA[darshanarrest]]></category>
		<category><![CDATA[kfi]]></category>
		<category><![CDATA[sandalwood]]></category>
		<guid isPermaLink="false">https://www.cinishodha.com/?p=10278</guid>

					<description><![CDATA[<p>ಕನ್ನಡ ಚಿತ್ರರಂಗದ ಮಟ್ಟಿಗೆ ಸೂಪರ್ ಸ್ಟಾರ್ ಆಗಿ ಮೆರೆದವನು ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಹುಶಃ ಇದುವರೆಗಿನ ಎಲ್ಲ ದಾಖಲೆಗಳನ್ನು ಹಿಂದಿಕ್ಕಿರೋ ದರ್ಶನ್, ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗವನ್ನು ಹೊಂದಿರುವಾತ. ತೀರಾ ಕಡುಗಷ್ಟದಿಂದ ಮೇಲೆದ್ದು ನಿಂತಿದ್ದ ಈತ ಒಂದು ಹಂತದಲ್ಲಿ ಸ್ಫೂರ್ತಿಯಾಗಿ ಕಾಣಿಸುತ್ತಿದ್ದದ್ದು ಸುಳ್ಳಲ್ಲ. ನಾಲಗೆಯ ಮೇಲೆ, ವರ್ತನೆಗಳ ಮೇಲೆ ನಿಗಾ ವಹಿಸಿದ್ದರೆ ಸರ್ವರಿಗೂ ಸಾರ್ವಕಾಲಿಕ ಸ್ಫೂರ್ತಿಯಾಗುವ ಎಲ್ಲ ಸಾಧ್ಯತೆಗಳೂ ಇದ್ದವು. ಆದರೆ, ಗೆಲುವು ಸಿಗುತ್ತಲೇ ಅಮರಿಕೊಳ್ಳುತ್ತಾ ಸಾಗಿದ ದುರಹಂಕಾರ, ಸಿಕ್ಕ ಸಿಕ್ಕಲ್ಲಿ ಮೇಯುವ ಬುದ್ಧಿ, ಸಾರ್ವಜನಿಕವಾಗಿಯೇ ಅಬ್ಬರಿಸಿ [...]</p>
<p>The post <a rel="nofollow" href="https://www.cinishodha.com/darshan-controversy-20-08-2025/">darshan controversy: ನಡೆದಿದೆಯಾ ಬಡಪಾಯಿಗಳನ್ನು ಬಲಿಹಾಕೋ ಷಡ್ಯಂತ್ರ?</a> appeared first on <a rel="nofollow" href="https://www.cinishodha.com">Cini Shodha</a>.</p>
]]></description>
										<content:encoded><![CDATA[<p style="text-align: justify;"><span style="font-size: 14pt;"><span style="color: #00ccff;"><strong><span style="font-size: 18pt;">ಕ</span></strong></span>ನ್ನಡ ಚಿತ್ರರಂಗದ ಮಟ್ಟಿಗೆ ಸೂಪರ್ ಸ್ಟಾರ್ ಆಗಿ ಮೆರೆದವನು ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಹುಶಃ ಇದುವರೆಗಿನ ಎಲ್ಲ ದಾಖಲೆಗಳನ್ನು ಹಿಂದಿಕ್ಕಿರೋ ದರ್ಶನ್, ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗವನ್ನು ಹೊಂದಿರುವಾತ. ತೀರಾ ಕಡುಗಷ್ಟದಿಂದ ಮೇಲೆದ್ದು ನಿಂತಿದ್ದ ಈತ ಒಂದು ಹಂತದಲ್ಲಿ ಸ್ಫೂರ್ತಿಯಾಗಿ ಕಾಣಿಸುತ್ತಿದ್ದದ್ದು ಸುಳ್ಳಲ್ಲ. ನಾಲಗೆಯ ಮೇಲೆ, ವರ್ತನೆಗಳ ಮೇಲೆ ನಿಗಾ ವಹಿಸಿದ್ದರೆ ಸರ್ವರಿಗೂ ಸಾರ್ವಕಾಲಿಕ ಸ್ಫೂರ್ತಿಯಾಗುವ ಎಲ್ಲ ಸಾಧ್ಯತೆಗಳೂ ಇದ್ದವು. ಆದರೆ, ಗೆಲುವು ಸಿಗುತ್ತಲೇ ಅಮರಿಕೊಳ್ಳುತ್ತಾ ಸಾಗಿದ ದುರಹಂಕಾರ, ಸಿಕ್ಕ ಸಿಕ್ಕಲ್ಲಿ ಮೇಯುವ ಬುದ್ಧಿ, ಸಾರ್ವಜನಿಕವಾಗಿಯೇ ಅಬ್ಬರಿಸಿ ಮೆರೆದಾಡೋ ದುಷ್ಟತನಗಳೆಲ್ಲವೂ ದರ್ಶನ್ ತಲುಪಿಕೊಂಡಿರುವ ಪ್ರಸ್ತುತ ಸ್ಥಿತಿಗೆ ಪ್ರಧಾನ ಕಾರಣವಾಗಿ ಗೋಚರಿಸುತ್ತವೆ.</span></p>
<p style="text-align: justify;"><img fetchpriority="high" decoding="async" class="alignnone wp-image-10279" src="https://www.cinishodha.com/wp-content/uploads/2025/08/Darshan-The-Devil-e1741450624150-1024x578-1-1-300x169.jpeg" alt="Darshan The Devil e1741450624150 1024x578 1 1" width="1024" height="578" title="darshan controversy: ನಡೆದಿದೆಯಾ ಬಡಪಾಯಿಗಳನ್ನು ಬಲಿಹಾಕೋ ಷಡ್ಯಂತ್ರ? 3 » cinishodha.com"><span style="font-size: 14pt;">ಸದ್ಯದ ಮಟ್ಟಿಗೆ ಹೇಳೋದಾದರೆ, ದರ್ಶನ್ ಅಕ್ಷರಶಃ ಅದುರಿ ಹೋಗಿದ್ದಾನೆ. ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಮೊದಲ ಬಾರಿ ಜೈಲು ಪ್ರವೇಶಿಸಿದ ಘಳಿಗೆಗೂ, ಈವತ್ತಿನ ವಾತಾವರಣಕ್ಕೂ ಅಜಗಜಾಂತರ ವ್ಯತ್ಯಾಸಗಳಿದ್ದಾವೆ. ಕಾಸು ಚೆಲ್ಲುವ ಮೂಲಕ ಜೈಲೊಳಗೆ ವೈಭೋಗದಿಂದ ಬದುಕಿದ್ದ ದರ್ಶನ್ ಪಟಾಲಮ್ಮಿಗೆ ಹೆಜ್ಜೆ ಹೆಜ್ಜೆಗೂ ಆಘಾತಗಳು ಎದುರಾಗುತ್ತಿವೆ. ಇದೆಲ್ಲದರ ನಡುವೆಯೇ ಈ ಪ್ರಕರಣದ ಗಂಭೀರ ತಿರುವುಗಳ ಬಗ್ಗೆ, ಒಟ್ಟಾರೆ ಕೇಸಿನ ಸಾಧ್ಯಾಸಾಧ್ಯತೆಗಳ ಬಗ್ಗೆ ಕಾನೂನು ತಜ್ಞರುಗಳು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ದರ್ಶನ್‌ಗೆ ಜೀವಾವಧಿ ಶಿಕ್ಷೆ ಖಚಿತ. ಕೊಂಚ ಆಚೀಚೆ ಆದರೆ ಮರಣದಂಡನೆ ವಿಧಿಸಿದರೂ ಅಚ್ಚರಿಯೇನಿಲ್ಲ ಎಂಬುದು ಅವರೆಲ್ಲರ ಮಾತಿನ ಸಾರ.</span></p>
<p style="text-align: justify;"><img decoding="async" class="alignnone wp-image-10280" src="https://www.cinishodha.com/wp-content/uploads/2025/08/file-image-2024-10-14t180948-1728909602-1-300x169.webp" alt="file image 2024 10 14t180948 1728909602 1" width="1024" height="576" title="darshan controversy: ನಡೆದಿದೆಯಾ ಬಡಪಾಯಿಗಳನ್ನು ಬಲಿಹಾಕೋ ಷಡ್ಯಂತ್ರ? 4 » cinishodha.com"><span style="font-size: 14pt;">ಯಾವ ಶಿಕ್ಷೆಯಾದರೂ ಕೂಡಾ ದರ್ಶನ್ ಬದುಕು ಹಡಾಲೆದ್ದು ಹೋಗುತ್ತೆ. ಈ ಕಾರಣದಿಂದಲೇ ಕಾನೂನಾತ್ಮಕವಾಗಿಯೇ ದರ್ಶನ್ ಪವಿತ್ರಾ ಗೌಡಳ ಸಮೇತ ನುಣುಚಿಕೊಂಡು, ಅಭಿಮಾನಕ್ಕೆ ಕಟ್ಟು ಬಿದ್ದು ಕೊಲೆ ಕೇಸಿನಲ್ಲಿ ಭಾಗಿಯಾದವರಿಗೆ ಖೆಡ್ಡ ತೋಡುವ ಪ್ರಯತ್ನಗಳು ನಡೆಯುತ್ತಿವೆಯಾ? ಹೀಗೊಂದು ಗುಮಾನಿ ದಟ್ಟವಾಗಿಯೇ ಹಬ್ಬಿಕೊಳ್ಳುತ್ತಿದೆ. ಇತ್ತ ಪವಿತ್ರಾಳ ಗೆಳತಿಯೋರ್ವಳು ಆಕೆ ತಪ್ಪೇ ಮಾಡಿಲ್ಲ ಎಂಬರ್ಥದಲ್ಲಿ ಪರ ವಹಿಸಿಕೊಂಡು ಮಾತಾಡುತ್ತಿದ್ದಾಳೆ. ಖುದ್ದು ಸುಪ್ರೀಂ ಕೋರ್ಟು ಬೇಲ್ ಕ್ಯಾನ್ಸಲ್ ಮಾಡೋ ಮುನ್ನ ಒಂದಿಡೀ ಅವಘಡಕ್ಕೆ ಪವಿತ್ರಾಳೇ ಮೂಲಕ ಕಾರಣ ಅಂತ ಛಾಟಿ ಬೀಸಿತ್ತು. ಹಾಗಿದ್ದರೂ ಈ ಹೆಂಗಸು ತನ್ನ ಗೆಳತಿ ಪವಿತ್ರ ಅಮಾಉಯಕಿ ಎಂಬರ್ಥದಲ್ಲಿ ಮಾತಾಡಿದ್ದಾಳೆ. ಅಂತೂ ಈ ಕೇಸಿನಲ್ಲಿ ದರ್ಶನ ಸೆಳೆತಕ್ಕೆ ಸಿಕ್ಕು ಭಾಗಿಯಾದವರನ್ನು ತಗುಲಿಸಿ ಪಾರಾಗುವ ಪ್ರಯತ್ನವೊಂದು ದಾಸನ ಕಡೆಯಿಂದ ನಡೆಯುತ್ತಿದೆಯಾ? ಇದಕ್ಕೆ ನಿಖರ ಉತ್ತರ ಸದ್ಯದಲ್ಲಿಯೇ ಸಿಗಲಿದೆ!</span></p>
<p>The post <a rel="nofollow" href="https://www.cinishodha.com/darshan-controversy-20-08-2025/">darshan controversy: ನಡೆದಿದೆಯಾ ಬಡಪಾಯಿಗಳನ್ನು ಬಲಿಹಾಕೋ ಷಡ್ಯಂತ್ರ?</a> appeared first on <a rel="nofollow" href="https://www.cinishodha.com">Cini Shodha</a>.</p>
]]></content:encoded>
					
		
		
			</item>
		<item>
		<title>darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?</title>
		<link>https://www.cinishodha.com/darshan-photo-leak-case-17-08-2025/</link>
		
		<dc:creator><![CDATA[Santhosh Bagilagadde]]></dc:creator>
		<pubDate>Sun, 17 Aug 2025 05:36:33 +0000</pubDate>
				<category><![CDATA[ಜಾಪಾಳ್ ಜಂಕ್ಷನ್]]></category>
		<category><![CDATA[#challengingstar]]></category>
		<category><![CDATA[#darshanthoogudeepa]]></category>
		<category><![CDATA[#renukaswamymurder]]></category>
		<category><![CDATA[crime]]></category>
		<category><![CDATA[darshan]]></category>
		<category><![CDATA[darshanphoto]]></category>
		<category><![CDATA[govtofkarnataka]]></category>
		<category><![CDATA[gparameshwar]]></category>
		<category><![CDATA[hafthamafia]]></category>
		<category><![CDATA[ipsbdayanand]]></category>
		<category><![CDATA[ipsmalinikrishnamurthy]]></category>
		<category><![CDATA[ksuresh]]></category>
		<category><![CDATA[malinikrishnamurthy]]></category>
		<category><![CDATA[mudrdercase]]></category>
		<category><![CDATA[parappanaagrahara]]></category>
		<category><![CDATA[pavithragowa]]></category>
		<category><![CDATA[photoleak]]></category>
		<category><![CDATA[underworldmafiya]]></category>
		<category><![CDATA[wilsongardennaga]]></category>
		<guid isPermaLink="false">https://www.cinishodha.com/?p=10254</guid>

					<description><![CDATA[<p>ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್&#8217; ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ ಪಟ್ಟಿದ್ದ. ಕಡೆಗೂ ಮಂಡ್ಯ ಸೀಮೆಯ ಶಾಸಕರೋರ್ವರ ಮೂಲಕ ಜಾತಿ ಲಾಬಿ ನಡೆಸಿ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ನೋಡಿಕೊಂಡಿದ್ದ. ಆದರೆ, ಶೇಷ ಪರಪ್ಪನ ಅಗ್ರಹಾರವನ್ನು ಹಡಾಲೆಬ್ಬಿಸಿದ್ದ ರೀತಿಯಿದೆಯಲ್ಲಾ? ಅದು ದರ್ಶನ್ ಜೈಲುಪಾಲಾದ ನಂತರ ನಾನಾ ಸ್ವರೂಪಗಳಲ್ಲಿ ಜಾಹೀರಾಗುತ್ತಿದೆ. ಇದೆಲ್ಲದರ ಮೇಲೆ [...]</p>
<p>The post <a rel="nofollow" href="https://www.cinishodha.com/darshan-photo-leak-case-17-08-2025/">darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?</a> appeared first on <a rel="nofollow" href="https://www.cinishodha.com">Cini Shodha</a>.</p>
]]></description>
										<content:encoded><![CDATA[<blockquote class="modern-quote full">
<p style="text-align: justify;"><span style="color: #000000;"><cite><strong><span style="font-size: 14pt;">ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್&#8217; ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ ಪಟ್ಟಿದ್ದ. ಕಡೆಗೂ ಮಂಡ್ಯ ಸೀಮೆಯ ಶಾಸಕರೋರ್ವರ ಮೂಲಕ ಜಾತಿ ಲಾಬಿ ನಡೆಸಿ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ನೋಡಿಕೊಂಡಿದ್ದ. ಆದರೆ, ಶೇಷ ಪರಪ್ಪನ ಅಗ್ರಹಾರವನ್ನು ಹಡಾಲೆಬ್ಬಿಸಿದ್ದ ರೀತಿಯಿದೆಯಲ್ಲಾ? ಅದು ದರ್ಶನ್ ಜೈಲುಪಾಲಾದ ನಂತರ ನಾನಾ ಸ್ವರೂಪಗಳಲ್ಲಿ ಜಾಹೀರಾಗುತ್ತಿದೆ. ಇದೆಲ್ಲದರ ಮೇಲೆ ಈ ಹಿಂದೆ ಬಂಧೀಖಾನೆ ಮುಖ್ಯಸ್ಥೆಯಾಗಿದ್ದ ಮಾಲಿನಿ ಕೃಷ್ಣಮೂರ್ತಿಯ ನೆರಳಿದೆ ಎಂಬ ಆರೋಪವೂ ಇದೆ. ಈಗ ಲೀಕಾಗಿರುವ ದರ್ಶನ್ ಫೋಟೋದ ಹಿಂದೆಯೂ ಪರಪ್ಪನ ಅಗ್ರಹಾರದೊಳಗಿನ ಕಡುಭ್ರಷ್ಟ ವಾತಾವರಣದ ಕೈವಾಡ ಇದ್ದೇ ಇದೆ. ಪರಿವರ್ತನೆಯ ತಾಣವಾದ ಜೈಲು ಫಟಿಂಗ ಅಧಿಕಾರಿಗಳ ಕೈಗೆ ಸಿಕ್ಕರೆ ಏನಾಗಬಹುದೋ ಅದೆಲ್ಲವಕ್ಕೂ ಪರಪ್ಪನ ಅಗ್ರಹಾರ ತಾಜಾ ಉದಾಹರಣೆಯಂತಾಗಿದೆ!</span></strong></cite></span></p>
<p style="text-align: justify;"><span style="color: #000000;"><cite><strong><span style="font-size: 14pt;">-ಸಂತೋಷ್ ಬಾಗಿಲಗದ್ದೆ</span></strong></cite></span></p>
</blockquote>
<p style="text-align: justify;"><span style="font-size: 14pt;"><span style="color: #00ccff;"><strong><span style="font-size: 18pt;">ರೇ</span></strong></span>ಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಸಿಕ್ಕಿದ್ದ ಬೇಲ್ ರದ್ದಾಗಿದ್ದರಿಂದಾಗಿ ದರ್ಶನ್ ಪಟಾಲಮ್ಮು ಮತ್ತೆ ಜೈಲುಪಾಲಾಗಿದೆ. ಹಾಗೆ ದರ್ಶನ್ ಪರಪ್ಪನ ಅಗ್ರಹಾರ ಸೇರುತ್ತಲೇ ಮೀಡಿಯಾ ಮಂದಿ ಜೈಲಿನ ಹೊರ ಭಾಗದಲ್ಲಿ ಹದ್ದಿನಕಣ್ಣಿಟ್ಟು ಪಹರೆ ಕಾಯಲಾರಂಭಿಸಿದ್ದಾರೆ. ದರ್ಶನ್ ಕೆಮ್ಮಿದ್ದು, ಕ್ಯಾಕರಿಸಿದ್ದು, ಬೆಳಗ್ಗೆ ಉಪ್ಪಿಟ್ಟು ತಿಂದ ಸುದ್ದಿಗಳೆಲ್ಲ ಬಗ್ಗಡದಂತೆ ಜನಸಾಮಾನ್ಯರ ಮುಂದೆ ಗುಡ್ಡೆ ಬೀಳುತ್ತಿವೆ. ಇದೇ ಹೊತ್ತಿನಲ್ಲಿ ಏಕಾಏಕಿ ದರ್ಶನ್ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಬಿಟ್ಟಿದೆ. ಅದು ಯಾವೊಬ್ಬ ಸ್ಟಾರ್ ನಟನೂ ಕಾಣಿಸಿಕೊಳ್ಳಲು ಇಷ್ಟಪಡದ ರೀತಿಯಲ್ಲಿರೋ ದರ್ಶನ್ ಫೋಟೋ. ಅದನ್ನಿಟ್ಟುಕೊಂಡು ವಿರೋಧಿ ಪಾಳೆಯ ಕುಹಕವಾಡಲಾರಂಭಿಸಿದರೆ, ಅಭಿಮಾನಿ ಪಡೆ ದುಃಖದ ಮಡುವಿಗೆ ಬಿದ್ದಿದೆ. ಕೆಲ ಮಾಧ್ಯಮಗಳಲ್ಲಿ ಅದು ದರ್ಶನ್ ಜೈಲುಪಾಲಾದ ಘಳಿಗೆಯ ಫೋಟೋ ಅಂತೆಲ್ಲ ಸುದ್ದಿ ಬಿತ್ತರಿಸಲಾಗುತ್ತಿದೆ. ಆ ಫೋಟೋದ ಮೂಲ ಹುಡುಕುತ್ತಾ ಹೋದರೆ, ಪರಪ್ಪನ ಅಗ್ರಹಾರ ಜೈಲೊಳಗಿನ ಅರಾಜಕ ಸ್ಥಿತಿಯನ್ನು ಮತ್ತೊಮ್ಮೆ ಬಯಲಾಗುತ್ತದೆ!</span></p>
<p style="text-align: justify;"><span style="font-size: 14pt;"><strong>ಅದು ಗುಪ್ತ ಫೋಟೋ!</strong></span></p>
<p style="text-align: justify;"><img decoding="async" class="alignnone wp-image-10255" src="https://www.cinishodha.com/wp-content/uploads/2025/08/d2eefc62-5a5a-42b0-b889-a59db7359640-243x300.jpg" alt="d2eefc62 5a5a 42b0 b889 a59db7359640" width="1024" height="1265" title="darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್? 9 » cinishodha.com"><span style="font-size: 14pt;">ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ ಶೋಧ ನ್ಯೂಸ್ ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ ಪಟ್ಟಿದ್ದರು. ಕಡೆಗೂ ಮಂಡ್ಯ ಸೀಮೆಯ ಶಾಸಕರೋರ್ವರ ಮೂಲಕ ಜಾತಿ ಲಾಬಿ ನಡೆಸಿ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ನೋಡಿಕೊಂಡಿದ್ದರು. ಆದರೆ, ಶೇಷ ಪರಪ್ಪನ ಅಗ್ರಹಾರವನ್ನು ಹಡಾಲೆಬ್ಬಿಸಿದ್ದ ರೀತಿಯಿದೆಯಲ್ಲಾ? ಅದು ದರ್ಶನ್ ಜೈಲುಪಾಲಾದ ನಂತರ ನಾನಾ ಸ್ವರೂಪಗಳಲ್ಲಿ ಜಾಹೀರಾಗುತ್ತಿದೆ. ಈಗ ಲೀಕಾಗಿರುವ ದರ್ಶನ್ ಫೋಟೋದ ಹಿಂದೆಯೂ ಪರಪ್ಪನ ಅಗ್ರಹಾರದೊಳಗಿನ ಕಡುಭ್ರಷ್ಟ ವಾತಾವರಣದ ಕೈವಾಡ ಇದ್ದೇ ಇದೆ.</span><br />
<span style="font-size: 14pt;">ಸಾಮಾನ್ಯವಾಗಿ ಯಾವ ಹೀರೋಗಳೂ ಕೂಡಾ ಕಳೆಗುಂದಿದ ಫೋಟೋಗಳು ಪ್ರೇಕ್ಷಕರೆದುರು ತೆರೆದುಕೊಳ್ಳೋದನ್ನು ಸಹಿಸೋದಿಲ್ಲ. ದರ್ಶನ್ ವಿಗ್ ಬಳಸಿಕೊಂಡು ಮ್ಯಾನೇಜು ಮಾಡಿದ್ದರ ಹಿಂದೆಯೂ ಅದೇ ಫಾರ್ಮುಲಾವಿದೆ. ದರ್ಶನ್ ಇತ್ತೀಚೆಗಷ್ಟೇ ತಿರುಪತಿಯಲ್ಲಿ ಮುಡಿಕೊಟ್ಟು ಬಂದಿದ್ದ. ಅಷ್ಟರಲ್ಲಿಯೇ ಸುಪ್ರೀಂ ಕೋರ್ಟಿನಲ್ಲಿ ಬೇಲ್ ರದ್ದಾಗಿ ಆತ ಜೈಲುಪಾಲಾಗುವ ಸಂದರ್ಭ ಎದುರಾಗಿದೆ. ಹೀಗೆ ಹೊಸತಾಗಿ ಕೈದಿಗಳು ಸೇರ್ಪಡೆಗೊಳ್ಳುವಾಗ ಪರಪ್ಪನ ಅಗ್ರಹಾರದ ವೆಬ್ ಕ್ಯಾಮೆರಾದಲ್ಲಿ ಫೋಟೋ ಹಿಡಿದು, ಕಂಪ್ಯೂಟರಿನಲ್ಲಿ ದಾಖಲೆಯಾಗಿ ಇಡಲಾಗುತ್ತೆ. ಅದು ಗೌಪ್ಯವಾಗಿರಬೇಕೆಂಬ ನಿಯಮಾವಳಿ ಇದೆ. ಈಗ ವೈರಲ್ ಆಗಿರೋ ದರ್ಶನ್ ಫೋಟೋ ಅದೇ ರೀತಿ ಪರಪ್ಪನ ಅಗ್ರಹಾರದೊಳಗಿನ ವೆಬ್ ಕ್ಯಾಮ್‌ನಲ್ಲಿ ತೆಗೆದಿರುವುದೆಂಬುದರಲ್ಲಿ ಯಾವ ಸಂದೇಹವೂ ಇಲ್ಲ.</span><br />
<span style="font-size: 14pt;">ಹಾಗಾದರೆ, ಜೈಲಿನ ಕಡತದಲ್ಲಿರಬೇಕಾದ, ವೆಬ್ ಕ್ಯಾಮ್ ಸೆರೆ ಹಿಡಿದು ಗುಪ್ತವಾಗಿಡಬೇಕಾದ ಫೋಟೋ ಹೊರಬಂದಿದ್ದು ಹೇಗೆ? ಪರಪ್ಪನ ಅಗ್ರಹಾರದೊಳಗಿಂದ ದರ್ಶನ್ ಫೋಟೋವನ್ನು ಲೀಕ್ ಮಾಡಿದವರ್‍ಯಾರು? ಇಂಥಾ ಹತ್ತಾರು ಪ್ರಶ್ನೆಗಳು ಸಹಜವಾಗಿಯೇ ಮೂಡಿಕೊಳ್ಳುತ್ತವೆ. ಈ ಹಿನ್ನೆಲೆಯಲ್ಲಿ ತಲಾಶು ನಡೆಸಿದರೆ ಗುಮಾನಿಯೆಂಬುದು ಪರಪ್ಪನ ಅಗ್ರಹಾರದ ಮುಖ್ಯ ಜೈಲು ಅಧೀಕ್ಷಕ ಸುರೇಶ್ ಸುತ್ತ ಸುಳಿದಾಡುತ್ತದೆ. ಒಂದಿಡೀ ಜೈಲಿನ ದೇಖಾರೇಖಿಯನ್ನು ನೋಡಿಕೊಂಡು, ಎಲ್ಲ ವಿಧದಲ್ಲಿಯೂ ಗೌಪ್ಯತೆ ಕಾಪಾಡಿಕೊಳ್ಳಬೇಕಾದಾತ ಸುರೇಶ್. ಈತನ ನೆರಳಲ್ಲಿಯೇ ದರ್ಶನ್ ಫೋಟೋ ಲೀಕ್ ಆಗಿದೆಯೆಂದರೆ ನಾನಾ ದಿಕ್ಕಿನಲ್ಲಿ ಅನುಮಾನ ಮೂಡಿಕೊಳ್ಳೋದು ಸಹಜ. </span></p>
<p style="text-align: justify;"><strong><span style="font-size: 14pt;">ಮಾಲಿನಿ ಭಂಟ ಸುರೇಶ</span></strong></p>
<p style="text-align: justify;"><img loading="lazy" decoding="async" class="alignnone wp-image-10256" src="https://www.cinishodha.com/wp-content/uploads/2025/08/e63188ae-74af-4458-a490-25854c8505e9-181x300.jpg" alt="e63188ae 74af 4458 a490 25854c8505e9" width="1024" height="1697" title="darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್? 10 » cinishodha.com"><span style="font-size: 14pt;">ಅಷ್ಟಕ್ಕೂ ಸುರೇಶ್ ಹಿನ್ನೆಲೆ ಗಮನಿಸಿದರೆ ದರ್ಶನ್ ಫೋಟೋ ಲೀಕ್ ಪ್ರಕರಣದ ಸುತ್ತ ಹಬ್ಬಿಕೊಂಡಿರುವ ಅನುಮಾನಗಳು ಬಲಗೊಳ್ಳುತ್ತವೆ. ಈ ಹಿಂದೆ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧಿಯಾಗಿದ್ದಾಗ ಆತನಿಗೆ ರಾಜಾತಿಥ್ಯ ನೀಡಿದ ಬಗ್ಗೆ ವಿವಾದವೆದ್ದಿತ್ತು. ದಾಸ ಜೈಲೊಳಗೆ ವಿಲ್ಸನ್ ಗಾರ್ಡನ್ ನಾಗನಂಥಾ ರೌಡಿ ಎಲಿಮೆಂಟುಗಳ ಜೊತೆ ಆರಾಮಾಗಿ ಧಮ್ಮು ಹೊಡೆಯುತ್ತಿದ್ದ ಫೋಟೋ ಲೀಕ್ ಆಯ್ತಲ್ಲಾ? ಅದು ಸರ್ಕಾರವನ್ನೇ ಮುಜುಗರಕ್ಕೀಡು ಮಾಡಿತ್ತು. ಅದೆಂಥಾ ಗಂಭೀರ ಆರೋಪಗಳಿದ್ದರೂ ಅಂಡಿನ ಕೆಳ ಹಾಕಿ ನಿರಾಳವಾಗಿ ಕೂರಬಲ್ಲ ಗೃಹಸಚಿವ ಪರಮೇಶ್ವರ್ ಕೂಡಾ ಇದರಿಂದಾಗಿ ಪೀಕಲಾಟಕ್ಕಿಟ್ಟುಕೊಂಡಿದ್ದರು. ವಿಶೇಷವೆಂದರೆ, ಆ ಪ್ರಕರಣದಲ್ಲಿ ಆ</span><span style="font-size: 14pt;">ಕಾಲಕ್ಕೆ ಬಂಧಿಖಾನೆಗಳ ಮುಖ್ಯಸ್ಥರಾಗಿದ್ದ ಐಪಿಎಸ್ ಮಾಲಿನಿ ಕೃಷ್ಣಮೂರ್ತಿಯವರ ಮೇಲೇ ನೇರವಾಗಿ ಆರೋಪ ಕೇಳಿ ಬಂದಿತ್ತು. ಸಹಾಯಕ ಅಧೀಕ್ಷಕರಾಗಿದ್ದ ಕರ್ಣ ಕ್ಷತ್ರಿಯ ಹಾಗೂ ಮಾಲಿನಿ ಕೃಷ್ಣಮೂರ್ತಿಯವರ ಸಹಾಯಕರಾಗಿದ್ದ ಕೆ. ಸುರೇಶ್ ಮೂಲಕ ದರ್ಶನ್ ಕಡೆಯಿಂದ ಎರಡು ಕೋಟಿ ಗುಂಜಿಕೊಂಡ ಘನ ಗಂಭೀರ ಆರೋಪ ಮಾಲಿನಿ ಕೃಷ್ಣಮೂರ್ತಿ ಅವರ ಮೇಲಿತ್ತು. ಈಗ ದರ್ಶನ್ ಬೇಲ್ ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ಮಾಲಿನಿ ಪ್ರಕರಣದ ಬಗ್ಗೆಯೂ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಿದೆ. ಈ ಹಿಂದೆ ದರ್ಶನ್‌ಗೆ ರಾಜಾತಿಥ್ಯ ವಿಚಾರ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಲೇ ಐಪಿಎಸ್ ಅಧಿಕಾರಿ ಚಂದ್ರಗುಪ್ತರನ್ನು ತನಿಖೆ ನಡೆಸಲು ನೇಮಿಸಲಾಗಿತ್ತು. ಈ ತನಿಖೆಯಲ್ಲಿ ಒಟ್ಟು ಹದಿನೇಳು ಮಂದಿ ಜೈಲಾಧಿಕಾರಿಗಳ ವಿರುದ್ಧ ಎಲ್ಲ ಆರೋಪಗಳು ಸಾಬೀತಾಗಿದ್ದವು. ಅದರಲ್ಲಿ ಹನ್ನೊಂದು ಮಂದಿಯನ್ನು ಅಮಾನತುಗೊಳಿಸಲಾಗಿತ್ತು.</span><br />
<span style="font-size: 14pt;">ಆದರೆ, ಸಹಾಯ ಅಧೀಕ್ಷಕ ಕರ್ಣ ಕ್ಷತ್ರಿಯ ಹಾಗೂ ಈಗ ಮುಖ್ಯ ಅಧೀಕ್ಷಕರಾಗಿರುವ ಕೆ ಸುರೇಶ್ ಮಾಲಿನಿ ಕೃಷ್ಣಮೂರ್ತಿಯ ಕೃಪೆಯಿಂದ ಬಚಾವಾಗಿದ್ದಾರೆ. ಮತ್ತದೇ ಹಳೇ ದಂಧೆಗಳನ್ನು ಮುಂದುವರೆಸಿದ್ದಾರೆಂಬ ಆರೋಪಗಳಿದ್ದಾವೆ. ಇದೀಗ ದರ್ಶನ್ ಫೋಟೋ ಲೀಕ್ ಆಗುವ ಮೂಲಕ ಮುಖ್ಯ ಅಧೀಕ್ಷಕ ಸುರೇಶ ಅದೆಂಥಾ ಅಧಕ್ಷ ಅಧಿಕಾರಿ ಎಂಬ ವಿಚಾರ ನಿಖರವಾಗಿಯೇ ಸಾಬೀತಾಗಿದೆ. ಜೈಲೊಳಗಿಂದಲೇ ಫೋನ್ ಪೇ ಮೂಲಕ ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆಯುತ್ತಿರೋ ಸುಳಿವುಗಳೂ ಸಿಕ್ಕಿವೆ. ಸಜಾಶ ಕೈದಿಗಳು ಜೈಲೊಳಗಿದ್ದುಕೊಂಡೇ ಮೊಬೈಲ್ ಮೂಲಕ ಧಮಕಿ ಹಾಕಿ ಹಪ್ತಾ ವಸೂಲಿ ಮಾಡುತ್ತಿರುವ ಕರಾಳ ದಂಧೆಯೂ ಬಯಲಾಗಿದೆ. ಈ ಬಗ್ಗೆ ಸಿಸಿಬಿಯಲ್ಲಿ ಎಫ್‌ಐಆರ್ ಆಗಿ ತನಿಖೆ ನಡೆಯುತ್ತಿದೆ. ಈ ದಂಧೆಗೆ ಅನುವು ಮಾಡಿಕೊಡುವ ಮೂಲಕ ಮುಖ್ಯ ಅಧೀಕ್ಷಕ ಸುರೇಶ ಮತ್ತು ಕರ್ಣ ಕೋಟ್ಯಾಂತರ ರೂಪಾಯಿ ಶೇರು ಪಡೆದಿರೋದು ಬೆಳಕಿಗೆ ಬಂದಿದೆಯಂತೆ! </span></p>
<p style="text-align: justify;"><strong><span style="font-size: 14pt;">2ಕೋಟಿ ಕೊಟ್ಟೆ ಅಂದ!</span></strong></p>
<p style="text-align: justify;"><img loading="lazy" decoding="async" class="alignnone wp-image-10257" src="https://www.cinishodha.com/wp-content/uploads/2025/08/malini-krishnamurthy-ips-300x196.jpg" alt="malini krishnamurthy ips" width="1024" height="669" title="darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್? 11 » cinishodha.com"><span style="font-size: 14pt;">ಸುಮ್ಮನೊಮ್ಮೆ ಆಲೋಚಿಸಿ ನೋಡಿ, ಈ ಹಿಂದೆ ದರ್ಶನ್ ಜೈಲು ಸೇರಿದಾಗಲೂ ಫೋಟೋ ಲೀಕ್ ಆಗಿತ್ತು. ಈಗಲೂ ಅದು ಮತ್ತೊಂದು ಅವತಾರದಲ್ಲಿ ಮುಂದುವರೆದಿದೆ. ಈ ಮೂಲಕವೇ ದರ್ಶನ್ ಕಡೆಯಿಂದ ಮತ್ತೊಂದಷ್ಟು ಕಾಸು ಗುಂಜಿಕೊಳ್ಳಲು ಪರಪ್ಪನ ಅಗ್ರಹಾರದೊಳಗಿನ ಶನಿಸಂತಾನಿಗರು ತಯಾರಾದಂತಿದೆ. ಈ ಹಿಂದೆ ಬಂಧಿಖಾನೆ ಮುಖ್ಯಸ್ಥೆಯಾಗಿದ್ದ, ಈಗ ನಿವೃತ್ತರಾಗಿರುವ ಮಾಲಿನಿ ಕೃಷ್ಣಮೂರ್ತಿ ತಾನು ಬಚಾವಾಗೋದಲ್ಲದೇ ಸುರೇಶ, ಕರ್ಣ ಸೇರಿದಂತೆ ಒಂದಷ್ಟು ಭ್ರಷ್ಟ ಅಧಿಕಾರಿಗಳನ್ನು ಕಾಪಾಡಿಕೊಂಡಿದ್ದಾರೆ. ಕಾನೂನು ಪ್ರಕಾರವೇ ಎಲ್ಲ ನಡೆದಿದ್ದರೆ, ದರ್ಶನ್‌ಗೆ ರಾಜಾತಿಥ್ಯ ಕೊಟ್ಟ ಕೇಸಲ್ಲಿ ಮಾಲಿನಿ ಮೇಲೆ ಕಾನೂನು ಕ್ರಮ ಜರುಗುತ್ತಿತ್ತು. ಆದರೆ ಅವರು ಈಗ ಸಚಿವ ಸ್ಥಾನ ಕಳೆದುಕೊಂಡಿರುವ ರಾಜಣ್ಣನ ಕಡೆಯಿಂದ ಬಚಾವಾಗಿ, ತನ್ನ ಕೂಟವನ್ನೂ ಸೇಫ್ ಆಗಿಸಿದ್ದಾರೆಂಬ ಆರೋಪಗಳಿದ್ದಾವೆ. </span><br />
<span style="font-size: 14pt;">ಚಂದ್ರಗುಪ್ತ ವರದಿಯಲ್ಲಿ ಉಲ್ಲೇಖವಾಗಿದ್ದ ಅಂಶಗಳು ಗಂಭೀರವಾಗಿದ್ದವು. ಅದರನ್ವಯ ಕ್ರಮ ಕೈಗೊಂಡಿದ್ದಿದ್ದರೆ ಆಗ ಬಂಧಿಖಾನೆ ಮುಖ್ಯಸ್ಥೆಯಾಗಿದ್ದ ಮಾಲಿನಿ ಕೃಷ್ಣಮೂರ್ತಿ ತನ್ನ ಭ್ರಷ್ಟ ಪಟಾಲಮ್ಮಿನ ಸಮೇತ ಅಮಾನತುಗೊಳ್ಳುತ್ತಿದ್ದರು. ಆದರೆ, ಆಕೆ ರಾಜಕೀಯ ಪ್ರಭಾವ ಬಳಸಿಕೊಂಡು ಚಂದ್ರಗುಪ್ತ ವರದಿಯನ್ನೇ ಪರಪ್ಪನ ಅಗ್ರಹಾರದಲ್ಲಿ ಬಂಧಿಸಿಟ್ಟಿದ್ದರು. ಆದರೀಗ ಮಾಲಿನಿ, ಕರ್ಣ, ಸುರೇಶ ಸೇರಿದಂತೆ ಪರಪ್ಪನ ಅಗ್ರಹಾರದೊಳಗಿರುವ ಸಮಸ್ತ ಭ್ರಷ್ಟ ಅಧಿಕಾರಿಗಳಿಗೆ ನಡುಕ ಶುರುವಾಗಿದೆ. ಯಾಕೆಂದರೆ, ದರ್ಶನ್ ಬೇಲ್ ಕ್ಯಾನ್ಸಲ್ ಮಾಡಿ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್ ಪರಪ್ಪನ ಅಗ್ರಹಾರದ ಲಂಚಬಾಕ ಅಧಿಕಾರಿಗಳಿಗೂ ಬಿಸಿ ಮುಟ್ಟಿಸಿದೆ. ಕಳೆದ ಬಾರಿ ದರ್ಶನ್ ರೌಡಿ ಪಟಾಲಮ್ಮಿನ ಜೊತೆಗಿರೋ ಫೋಟೋ ಲೀಕ್ ಆದಾದ ಗೃಹಸಚಿವ ಪರಮೇಶ್ವರ್ ಜೈಲಿಗೆ ಭೇಟಿ ಕೊಟ್ಟಿದ್ದರು. ಈ ಸಂದರ್ಭದಲ್ಲಿ ದರ್ಶನ್ ಪರಮ್ ಮುಂದೆಯೇ ಭಯಾನಕ ಸತ್ಯವೊಂದನ್ನು ಒದರಿದ್ದ. ಕರ್ಣ ಕ್ಷತ್ರಿಯ ಮತ್ತು ಈಗ ಮುಖ್ಯ ಜೈಲಾಧಿಕಾರಿಯಾಗಿರೋ ಕೆ ಸುರೇಶ್ ಮೂಲಕ ಮಾಲಿನಿ ಕೃಷ್ಣಮೂರ್ತಿ ತನ್ನಿಂದ ಎರಡು ಕೋಟಿ ಪಡೆದುಕೊಂಡಿದ್ದಾರೆಂಬುದು ದರ್ಶನ್ ಬಿಚ್ಚಿಟ್ಟ ಸತ್ಯದ ಸಾರಾಂಶವಾಗಿತ್ತು! </span></p>
<p style="text-align: justify;"><span style="font-size: 14pt;"><strong>ದಯಾನಂದ್ ಅವರ ಆವಗಾಹನೆಗೆ&#8230;</strong></span></p>
<p style="text-align: justify;"><span style="font-size: 14pt;"><img loading="lazy" decoding="async" class="alignnone wp-image-10258" src="https://www.cinishodha.com/wp-content/uploads/2025/08/b-dayananda-commissioner-bengaluru_1742483461-300x225.webp" alt="b dayananda commissioner bengaluru 1742483461" width="1024" height="768" title="darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್? 12 » cinishodha.com">ಈಗ ಬಂಧಿಖಾನೆ ಮುಖ್ಯಸ್ಥರಾಗಿ ಖಡಕ್ ಅಧಿಕಾರಿಯಾಗಿ ಹೆಸರು ಮಾಡಿರುವ ದಯಾನಂದ್ ಅವರು ಬಂದಿದ್ದಾರೆ. ಕಾರ್ಯನಿರ್ವಹಿಸಿದ ಜಾಗಗಳಲ್ಲೆಲ್ಲ ಅತ್ಯಂತ ಕಟ್ಟುನಿಟ್ಟಾಗಿ, ಯಾರ ಮುಲಾಜಿಗೂ ಬಗ್ಗೆದೆ ನಡೆದುಕೊಳ್ಳುವ ಮೂಲಕ ದಯಾನಂದ್ ಅವರು ಹೆಸರಾಗಿದ್ದಾರೆ. ಇಂಥಾ ಅಧಿಕಾರಿಯ ಸುಪರ್ಧಿಗೀಗ ಪರಪ್ಪನ ಅಗ್ರಹಾರವೂ ಸಿಕ್ಕಿದೆ. ಈ ಕಾರಣದಿಂದಲೇ ಈ ಹಿಂದೆ ಮಾಲಿನಿ ಕೃಷ್ಣಮೂರ್ತಿ ದರ್ಭಾರಿನಲ್ಲಿ ಮಲಿನಗೊಂಡಿದ್ದ ಪರಪ್ಪನ ಅಗ್ರಹಾರವನ್ನು ಕ್ಲೀನ್ ಮಾಡುತ್ತಾರೆಂಬ ನಂಬಿಕೆಯೂ ಮೂಡಿಕೊಂಡಿದೆ. ಈ ಸುರೇಶ ಮತ್ತು ಕರ್ಣ ಮಾಲಿನಿಯ ಮಾಲಿನ್ಯದ ತುಣುಕುಗಳೆಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಮೊದಲು ಸುರೇಶ ಮತ್ತು ಕರ್ಣನ ಅಂದಾದುಂದಿಗಳ ಬಗ್ಗೆ ದಯಾನಂದ್ ಅವರು ಗಮನಹರಿಸಬೇಕಿದೆ.<br />
ಈ ಹಿಂದೆ ಚಂದ್ರಗುಪ್ತ ವರದಿಯಲ್ಲಿ ಈ ಸುರೇಶ ಮತ್ತು ಕರ್ಣ ಆರೋಪಿ ಸ್ಥಾನದಲ್ಲಿ ನಿಂತಿದ್ದರು. ಅದರಂದ ಬಾಚಾವಾಗಿದ್ದ ಆತನಿಗೆ ಮತ್ತೆ ಕಂಟಕ ಶುರುವಾಗಿದೆ. ಒಂದು ಮೂಲದ ಪ್ರಕಾರ ಸುಪ್ರೀಂ ಕೋರ್ಟ್‌ಗೆ ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಶೀಘ್ರದಲ್ಲಿಯೇ ಚಂದ್ರಗುಪ್ತ ವರದಿಯನ್ನು ಸಲ್ಲಿಸಲಿದ್ದಾರೆ. ಹಾಗಾದೇಟಿಗೆ ಸುರೇಶ ತನ್ನ ಪಟಾಲಮ್ಮಿನ ತಮೇತ ಅಮಾನತ್ತಾಗಿ ತೊಲಗೋದು ಗ್ಯಾರೆಂಟಿ. ಅದರ ಬೆನ್ನಲ್ಲಿಯೇ ನಿವೃತ್ತರಾಗಿರುವ ಮಾಲಿನಿಯತ್ತಲೂ ತನಿಖೆಯ ಗಮನ ಹೊರಳಿಕೊಳ್ಳಲಿದೆ. ಮಾಲಿನಿಯ ಬಂಟ ಸುರೇಶ ದರ್ಶನ್ ವಿರೋಧಿ ಪಾಳೆಯದಿಂದ ಕಾಸು ಗುಂಜಿಕೊಂಡೇ ದರ್ಶನ್ ಫೋಟೋ ಲೀಕ್ ಮಾಡಿದ್ದಾರೆಂಬ ಆರೋಪವೂ ಹರಿದಾಡುತ್ತಿದೆ.<br />
ಹಾಗಾದರೆ, ದರ್ಶನ್ ಫೋಟೋ ಲೀಕ್ ಮಾಡೋದರಿಂದ ವಿರೋಧಿ ಪಾಳೆಯಕ್ಕಾಗುವ ಲಾಭವೇನು ಅಂತೊಂದು ಪ್ರಶ್ನೆ ಸಹಜ. ಸಾಮಾನ್ಯವಾಗಿ ಯಾವ ಹೀರೋಗಳೂ ಕೂಡಾ ಹೀಗೆ ಕಳೆಗುಂದಿದ, ತಲೆ ಕೂದಲಿಲ್ಲದ, ದೈಹಿಕವಾಗಿ ಕುಗ್ಗಿದ ಫೋಟೋಗಳು ಅಭಿಮಾನಿಗಳನ್ನು ತಲುಪೋದನ್ನು ಇಷ್ಟಪಡೋದಿಲ್ಲ. ದರ್ಶನ್ ಒಂದು ಕಾಲದಲ್ಲಿ ಕಂಡೋರನ್ನೆಲ್ಲ ದುರಹಂಕಾರದಿಂದ ಎದುರು ಹಾಕಿಕೊಂಡಿದ್ದನಲ್ಲಾ? ಆ ಕುದಿತ ಹೊಂದಿರೋ ಮಂದಿಯೇ ಈ ಫೋಟೋ ಲೀಕ್ ಹಿಂದಿರಬಹುದು. ಈ ಮೂಲಕ ಮೆರೆದಾಡುತ್ತಿದ್ದ ಅಭಿಮಾನಿಗಳನ್ನು ಉರಿಸುವ ಉದ್ದೇಶವೂ ಇದ್ದಿರಬಹುದು. ಅದನ್ನು ಜೈಲಾಧಿಕಾರಿ ಸುರೇಶ ಕಾಸಾಗಿ ಪಳಗಿಸಿಕೊಂಡಿದ್ದಾರೆಂಬ ಸಂಶಯವೇ ದಟ್ಟವಾಗಿದೆ. ಖಡಕ್ ಅಧಿಕಾರಿ ದಯಾನಂದ್ ಅವರು ಮೊದಲು ಪರಪ್ಪನ ಅಗ್ರಹಾರದೊಳಗಿರೋ ಸುರೇಶನಂಥಾ ಮಾಲಿನಿಯ ಚೇಲಾ ಪಡೆಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಆರಂಭಿಕವಾಗಿ ಸುರೇಶನಂಥ ಅಧಿಕಾರಿ ವರ್ಗವನ್ನು ಅಮಾನತುಗೊಳಿಸಿದರೆ ಪರಪ್ಪನ ಅಗ್ರಹಾರ ತಾನಾಗಿಯೇ ಶುಚಿಯಾಗುತ್ತದೆ. ಈಗ ದರ್ಶನ್ ಫೋಟೋ ಲೀಕ್ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಚೀಫ್ ಸೂಪರಿಟೆಂಡೆಂಟ್ ಸುರೇಶ ಮನೆ ಸೇರಿಕೊಳ್ಳುವ ಕ್ಷಣಗಳೂ ಹತ್ತಿರಾಗುತ್ತಿವೆ!<br />
</span></p>
<p>The post <a rel="nofollow" href="https://www.cinishodha.com/darshan-photo-leak-case-17-08-2025/">darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?</a> appeared first on <a rel="nofollow" href="https://www.cinishodha.com">Cini Shodha</a>.</p>
]]></content:encoded>
					
		
		
			</item>
		<item>
		<title>darsha-pavithra gowda: ದರ್ಶನ್-ಪವಿತ್ರಾಗೆ ಜೈಲು ಫಿಕ್ಸು!</title>
		<link>https://www.cinishodha.com/darsha-pavithra-gowda-%e0%b2%a6%e0%b2%b0%e0%b3%8d%e0%b2%b6%e0%b2%a8%e0%b3%8d-%e0%b2%aa%e0%b2%b5%e0%b2%bf%e0%b2%a4%e0%b3%8d%e0%b2%b0%e0%b2%be%e0%b2%97%e0%b3%86-%e0%b2%9c%e0%b3%88%e0%b2%b2%e0%b3%81/</link>
		
		<dc:creator><![CDATA[Santhosh Bagilagadde]]></dc:creator>
		<pubDate>Fri, 14 Jun 2024 14:09:30 +0000</pubDate>
				<category><![CDATA[ಜಾಪಾಳ್ ಜಂಕ್ಷನ್]]></category>
		<category><![CDATA[#darsha]]></category>
		<category><![CDATA[#karnatakapolice]]></category>
		<category><![CDATA[#pavithragowda]]></category>
		<category><![CDATA[#renukaswamymurder]]></category>
		<category><![CDATA[cinishodha]]></category>
		<category><![CDATA[sandalwood]]></category>
		<guid isPermaLink="false">https://www.cinishodha.com/?p=9049</guid>

					<description><![CDATA[<p>ಚಾಲೆಂಜಿಂಗ್ ಸ್ಟಾರ್ (challenging star darshan) ದರ್ಶನ್ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಗರಬಡಿದಂತೆ ಕುಕ್ಕರಿಸಿದ್ದಾನೆ. ಹೊರಗಡೆ ಥೇಟು ಅವನದ್ದೇ ವಿಕ್ಷಿಪ್ತ ವರ್ಷನ್ನಿನಂಥಾ ಅಭಿಮಾನಿ ಪಡೆ ನಿಂತಲ್ಲಿ ನಿಲ್ಲಲಾರದೆ, ಕುಂತಲ್ಲು ಕೂರಲಾರದೆ ಲಗಾಟಿ ಹೊಡೆಯಲಾರಂಭಿಸಿದೆ. ಮಾಧ್ಯಮಗಳ ಮುಂದೆ ಈ ಅವಿವೇಕಿಗಳು ಆಡುತ್ತಿರೋ ಮಾತು, ವಿತಂಡ ವಾದಗಳಂತೂ ಕ್ಯಾಕರಿಸಿ ತುಪುಕ್ಕನೆ ಮುಕಕ್ಕುಗಿದರೂ ಸಮಾಧಾನವಾಗದಷ್ಟು ವಿಕೃತವಾಗಿವೆ. ಅಂಥವರ ಪ್ರಕಾರ ತಮ್ಮ ಬಾಸು ಕಾನೂನು ಕಟ್ಟಳೆಗಳನ್ನೇ ಮೀರಿದವನು. ಪೊಲೀಸರೇ (karnataka police) ಚಾಲೆಂಜಿಂಗ್ ಸ್ಟಾರ್ ಮುಂದೆ ಡಮ್ಮಿ ಪೀಸುಗಳೆಂಬಂಥಾ ಕಾಮಿಡಿ ಯಥೇಚ್ಚವಾಗಿ [...]</p>
<p>The post <a rel="nofollow" href="https://www.cinishodha.com/darsha-pavithra-gowda-%e0%b2%a6%e0%b2%b0%e0%b3%8d%e0%b2%b6%e0%b2%a8%e0%b3%8d-%e0%b2%aa%e0%b2%b5%e0%b2%bf%e0%b2%a4%e0%b3%8d%e0%b2%b0%e0%b2%be%e0%b2%97%e0%b3%86-%e0%b2%9c%e0%b3%88%e0%b2%b2%e0%b3%81/">darsha-pavithra gowda: ದರ್ಶನ್-ಪವಿತ್ರಾಗೆ ಜೈಲು ಫಿಕ್ಸು!</a> appeared first on <a rel="nofollow" href="https://www.cinishodha.com">Cini Shodha</a>.</p>
]]></description>
										<content:encoded><![CDATA[<p style="text-align: justify;"><span style="font-size: 12pt;"><span style="color: #00ccff;"><strong><span style="font-size: 18pt;">ಚಾ</span></strong></span>ಲೆಂಜಿಂಗ್ ಸ್ಟಾರ್ (challenging star darshan) ದರ್ಶನ್ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಗರಬಡಿದಂತೆ ಕುಕ್ಕರಿಸಿದ್ದಾನೆ. ಹೊರಗಡೆ ಥೇಟು ಅವನದ್ದೇ ವಿಕ್ಷಿಪ್ತ ವರ್ಷನ್ನಿನಂಥಾ ಅಭಿಮಾನಿ ಪಡೆ ನಿಂತಲ್ಲಿ ನಿಲ್ಲಲಾರದೆ, ಕುಂತಲ್ಲು ಕೂರಲಾರದೆ ಲಗಾಟಿ ಹೊಡೆಯಲಾರಂಭಿಸಿದೆ. ಮಾಧ್ಯಮಗಳ ಮುಂದೆ ಈ ಅವಿವೇಕಿಗಳು ಆಡುತ್ತಿರೋ ಮಾತು, ವಿತಂಡ ವಾದಗಳಂತೂ ಕ್ಯಾಕರಿಸಿ ತುಪುಕ್ಕನೆ ಮುಕಕ್ಕುಗಿದರೂ ಸಮಾಧಾನವಾಗದಷ್ಟು ವಿಕೃತವಾಗಿವೆ. ಅಂಥವರ ಪ್ರಕಾರ ತಮ್ಮ ಬಾಸು ಕಾನೂನು ಕಟ್ಟಳೆಗಳನ್ನೇ ಮೀರಿದವನು. ಪೊಲೀಸರೇ (karnataka police) ಚಾಲೆಂಜಿಂಗ್ ಸ್ಟಾರ್ ಮುಂದೆ ಡಮ್ಮಿ ಪೀಸುಗಳೆಂಬಂಥಾ ಕಾಮಿಡಿ ಯಥೇಚ್ಚವಾಗಿ ಪ್ರದರ್ಶನಗೊಳ್ಳುತ್ತಿವೆ. ಹಾಗೆ ಎಗರಾಡಲು ಬಂದ ದರ್ಶನ್ (darshan fans) ಅಭಿಮಾನಿಗಳ ಅಂಡಿನಲ್ಲೀಗ ಲಾಠಿಯ ಬಾಸುಂಡೆಗಳೆದ್ದಿವೆ. ಹಾಗೊಂದು ಎಳಸು ಕುನ್ನಿಗಳ ಪಡೆ ಜುಟ್ಟು ಕೆದರಿಕೊಂಡು ಅಖಾಡಕ್ಕಿಳಿದವರೆಲ್ಲ ಸಾಕ್ಷಾತ್ತು ದರ್ಶನನ ಅಪರಾವತಾರಗಳಂತೆ ಕಾಣಿಸುತ್ತಿದ್ದಾರೆ.</span></p>
<p style="text-align: justify;"><img loading="lazy" decoding="async" class="alignnone wp-image-9050" src="https://www.cinishodha.com/wp-content/uploads/2024/06/Untitled-design-221708072417961-300x169.jpg" alt="Untitled design 221708072417961" width="1024" height="576" title="darsha-pavithra gowda: ದರ್ಶನ್-ಪವಿತ್ರಾಗೆ ಜೈಲು ಫಿಕ್ಸು! 16 » cinishodha.com" srcset="https://www.cinishodha.com/wp-content/uploads/2024/06/Untitled-design-221708072417961-300x169.jpg 300w, https://www.cinishodha.com/wp-content/uploads/2024/06/Untitled-design-221708072417961-768x432.jpg 768w, https://www.cinishodha.com/wp-content/uploads/2024/06/Untitled-design-221708072417961-1024x576.jpg 1024w, https://www.cinishodha.com/wp-content/uploads/2024/06/Untitled-design-221708072417961-150x84.jpg 150w, https://www.cinishodha.com/wp-content/uploads/2024/06/Untitled-design-221708072417961-450x253.jpg 450w, https://www.cinishodha.com/wp-content/uploads/2024/06/Untitled-design-221708072417961.jpg 1200w" sizes="(max-width: 1024px) 100vw, 1024px" /><span style="font-size: 12pt;">ತುಂಬಿದ ಸಭೆಯಲ್ಲಿ ಹರುಕು ಬಾಯಿ ತೆರೆಯುತ್ತಾ ಬಂದಿರುವಾತ ದರ್ಶನ್. ಅಡ್ಡಕಸುಬುಗಳೆಲ್ಲವೂ ತನ್ನ ಗಂಡಸುತನ ಎಂಬಂತೆ ದಾಸ ಬಿಂಬಿಸಿಕೊಂಡಿದ್ದ. ಈತನ ಪ್ರಕಾರ ಕಟ್ಟಿಕೊಂಡ ಹೆಂಡತಿಗೆ ಸತ್ತೇ ಹೋಗುವಂತೆ ಬಡಿಯುವುದೂ ಗಂಡಸ್ತನ. ಅಧಿಕೃತವಾಗಿ ಒಬ್ಬಳು ಮಡದಿ ಇರುವಾಗಲೇ ಮತ್ತೊಬ್ಬಳೊಂದಿಗೆ ಸಂಸಾರ ಶುರುವಿಟ್ಟುಕೊಳ್ಳೋದೇ ಧೈರ್ಯವಂತಿಕೆ. `ಒಬ್ಬಳೊ ಹೋದ್ರೆ ಮತೊಬ್ಬಳು ಬರ್ತಾಳೆ’ ಎಂಬಂಥಾ ತಲೆಮಾಸಿದ ಡೈಲಾಗುಗಳೇ ಈ ಆಸಾಮಿ ಲಕ್ಷಾಂತರ ಅಭಿಮಾನಿಗಳಿಗೆ ಕೊಡುವ ಬೋಧನೆ. ತಗಡು, ಪುಡಾಂಗುಗಳಂಥಾ ಪದಪುಂಜಗಳೇ ಈತನ ಪಾಲಿಗೆ ರಿಯಲಿಸ್ಟಿಕ್ ಮಾಸ್ ಎಲಿಮೆಂಟುಗಳು. ಇಂಥಾ ದರ್ಶನನಿಗೀಗ `ಅಯ್ಯೋ ತಗಡೇ, ಹೀರೋಗಿರಿ ಅಂದ್ರೇನು ಗೊತ್ತೇನೋ’ ಅಂತ ಕಾಲರು ಹಿಡಿದು ಕೇಳುವಷ್ಟು ಕರುನಾಡಿನ ಮಂದಿ ಆಕ್ರೋಶಗೊಂಡಿದ್ದಾರೆ.</span></p>
<p style="text-align: justify;"><img loading="lazy" decoding="async" class="alignnone wp-image-9051" src="https://www.cinishodha.com/wp-content/uploads/2024/06/107932465-300x200.webp" alt="107932465" width="1024" height="684" title="darsha-pavithra gowda: ದರ್ಶನ್-ಪವಿತ್ರಾಗೆ ಜೈಲು ಫಿಕ್ಸು! 17 » cinishodha.com" srcset="https://www.cinishodha.com/wp-content/uploads/2024/06/107932465-300x200.webp 300w, https://www.cinishodha.com/wp-content/uploads/2024/06/107932465-150x100.webp 150w, https://www.cinishodha.com/wp-content/uploads/2024/06/107932465.webp 400w" sizes="(max-width: 1024px) 100vw, 1024px" /><span style="font-size: 12pt;">ಹಾಗೆನೋಡಿದರೆ, ಈತನ ಮೆರೆದಾಟಗಳಲ್ಲಿ ಹೀರೋಗಿರಿಯ ಲವಲೇಷವೂ ಕಾಣಲು ಸಾಧ್ಯವಿಲ್ಲ. ಅದು ಪ್ರಜ್ನಾವಂತರ ಪಾಲಿಗೆ ಬೇಕರಿಗಳೆದುರು ಗುಡ್ಡೆಬೀಳುವ ಪುಡಿ ರೌಡಿಗಳ ಠೇಂಕಾರದಂತಷ್ಟೇ ಕಾಣಿಸುತ್ತಿತ್ತು. ಬಹುಶಃ ಹೀರೋಗಿರಿ ಅಂದ್ರೆ ಇದಲ್ಲ ದರ್ಶನ್ ಅಂತ ಬುದ್ಧಿ ಹೇಳುವವರ್ಯಾರೂ ಆತನ ವಲಯದಲ್ಲಿರಲಿಲ್ಲ. ರೌಡಿಗಳು, ಗಾಂಜಾ ಗಿರಾಕಿಗಳ ಕೊಂಪೆಯಲ್ಲಿ ತಲೆನೆಟ್ಟಗಿರುವ ಆಸಾಮಿಗಳಿರಲು ಸಾಧ್ಯವೂ ಇಲ್ಲ. ನಿಜ, ದರ್ಶನ್‍ಗೆ ರಾಜ್ಯಾದ್ಯಂತ ಬೇರೆಲ್ಲ ನಟರನ್ನು ಮೀರಿಸುವಂಥಾ ಫ್ಯಾನ್ ಬೇಸ್ ಇದೆ. ಅದು ಬದುಕು ಆತನಿಗೆ ಕಲ್ಪಿಸಿದ ಕಾರುಣ್ಯ. ಹಾಗೆ ದರ್ಶನ್ ಅಭಿಮಾನಿಗಳೆನ್ನಿಸಿಕೊಂಡವರಲ್ಲಿ ಯುವ ಸಮುದಾಯದ ಪಾಲು ದೊಡ್ಡದಿದೆ.</span></p>
<p style="text-align: justify;"><img loading="lazy" decoding="async" class="alignnone wp-image-9052" src="https://www.cinishodha.com/wp-content/uploads/2024/06/darshan1-1718091396-300x169.webp" alt="darshan1 1718091396" width="1024" height="577" title="darsha-pavithra gowda: ದರ್ಶನ್-ಪವಿತ್ರಾಗೆ ಜೈಲು ಫಿಕ್ಸು! 18 » cinishodha.com" srcset="https://www.cinishodha.com/wp-content/uploads/2024/06/darshan1-1718091396-300x169.webp 300w, https://www.cinishodha.com/wp-content/uploads/2024/06/darshan1-1718091396-150x85.webp 150w, https://www.cinishodha.com/wp-content/uploads/2024/06/darshan1-1718091396-450x254.webp 450w, https://www.cinishodha.com/wp-content/uploads/2024/06/darshan1-1718091396.webp 600w" sizes="(max-width: 1024px) 100vw, 1024px" /><span style="font-size: 12pt;">ಅಂಥಾ ಎಳೇಯ ಜೀವಗಳೆಲ್ಲ ಅಭಿಮಾನಕ್ಕಾಗಿ ಜೀವ ಕೊಡಲೂ ರೆಡಿ ಅಂತಿರುವಾಗ ದರ್ಶನ್ ನಿಜಕ್ಕೂ ಎಚ್ಚರಿಕೆಯಿಂದ ಅಡಿಯಿರಿಸಬೇಕಿತ್ತು. ತಾನಾಡುವ ಪ್ರತೀ ಮಾತು, ನಡವಳಿಕೆ ಒಂದಿಡೀ ಅಭಿಮಾನಿ ವಲಯಕ್ಕೆ ಮಾದರಿಯಾಗುತ್ತೆ. ತನ್ನ ಮಾತು ವರ್ತನೆಗಳು, ಬಳಸುವ ಭಾಷೆಗಳೇ ಅಭಿಮಾನಿ ಬಳಗದಲ್ಲಿ ಮಾರ್ಧನಿಸುತ್ತೆ. ತನ್ನ ಬದುಕಿನ ಕ್ರಮವೇ ಲಕ್ಷಾಂತರ ಅಭಿಮಾನಿಗಳ ಬದುಕುಗಳಲ್ಲಿ ಪ್ರತಿಫಲಿಸುತ್ತೆ&#8230; ಇಂಥಾ ಖಬರು ದರ್ಶನ್ ಪಾಲಿಗೆ ಕಡೆಗೂ ಬರಲೇ ಇಲ್ಲ. ಈವತ್ತಿಗೆ ದರ್ಶನ್ ಪರವಾಗಿ ಮಾತಾಡುವ ಅಭಿಮಾನಿಗಳನ್ನ ಕಂಡರೆ ನಿಜಕ್ಕೂ ಮರುಕ ಹುಟ್ಟುತ್ತದೆ. ದರ್ಶನ್ ಆತ್ಮವೇ ಈ ಎಳಸು ಕುನ್ನಿಗಳಿಗೂ ದಾಟಿಕೊಂಡಿದೆಯೇನೋ ಎಂಬಂಥಾ ಸಂಶಯ ಮೂಡುತ್ತದೆ. ಹೀಗೆ ತನ್ನ ಠೇಂಕಾರದಿಂದ ಯುವ ಸಮೂಹವನ್ನ ಹಾಳುಗೆಡವಿದ ಕುಖ್ಯಾತಿ ದರ್ಶನ್‍ಗೆ ಅಂಟಿಕೊಂಡಿದೆ. ಅದು ಒಂದರ್ಥದಲ್ಲಿ ಈ ಸಮಾಜವನ್ನೇ ಊನಗೊಳಿಸಿದಂಥಾ ಪಾಪಕೃತ್ಯ. ಅದು ಓರ್ವ ಅಭಿಮಾನಿಯ ಜೀವಕ್ಕೆ ಕುತ್ತು ತಂದಷ್ಟೇ ಪಾಪಿಷ್ಟ ಕೆಲಸ!</span></p>
<p>The post <a rel="nofollow" href="https://www.cinishodha.com/darsha-pavithra-gowda-%e0%b2%a6%e0%b2%b0%e0%b3%8d%e0%b2%b6%e0%b2%a8%e0%b3%8d-%e0%b2%aa%e0%b2%b5%e0%b2%bf%e0%b2%a4%e0%b3%8d%e0%b2%b0%e0%b2%be%e0%b2%97%e0%b3%86-%e0%b2%9c%e0%b3%88%e0%b2%b2%e0%b3%81/">darsha-pavithra gowda: ದರ್ಶನ್-ಪವಿತ್ರಾಗೆ ಜೈಲು ಫಿಕ್ಸು!</a> appeared first on <a rel="nofollow" href="https://www.cinishodha.com">Cini Shodha</a>.</p>
]]></content:encoded>
					
		
		
			</item>
	</channel>
</rss>
